ಸ್ವಗ್ರಾಮಗಳಿಗೆ ತೆರಳಿದ 198 ವಲಸೆ ಕಾರ್ಮಿಕರು
Team Udayavani, May 30, 2020, 4:59 PM IST
ಸಾಂದರ್ಭಿಕ ಚಿತ್ರ
ನಾರಾಯಣಪುರ: ರಾಜನಕೋಳುರ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಮಹಾರಾಷ್ಟ್ರದಿಂದ ಆಗಮಿಸಿದ್ದ 222 ವಲಸೆ ಕಾರ್ಮಿಕರ ಪೈಕಿ 198 ಜನರ ಕಾರ್ಮಿಕರ ಗಂಟಲು ದ್ರವದ ಪರೀಕ್ಷೆ ವರದಿ ನೆಗೆಟಿವ್ ಬಂದಿದ್ದರಿಂದ ಅವರನ್ನು ಸ್ವಗ್ರಾಮಗಳಿಗೆ ಕಳುಹಿಸಿಕೊಡಲಾಯಿತು. ಇದರೊಂದಿಗೆ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರೈಸಿದವರನ್ನು ಆರೋಗ್ಯ ತಪಾಸಣೆ ನಡೆಸಿ ಕೈಗಳಿಗೆ ಹೋಂ ಕ್ವಾರಂಟೈನ್ ಸೀಲ್ ಹಾಕುವ ಮೂಲಕ 4 ಪ್ರತ್ಯೇಕ ಬಸ್ಗಳಲ್ಲಿ ಸ್ವಗ್ರಾಮಗಳಿಗೆ ಕಳಿಸಲಾಯಿತು.
198 ಜನರ ವರದಿ ನೆಗಟಿವ್: ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದ 222 ಕಾರ್ಮಿಕರ ಪೈಕಿ 198 ಜನ ಕಾರ್ಮಿಕರ ವರದಿ ನೆಗೆಟಿವ್ ಬಂದಿದೆ. ಇನ್ನುಳಿದವರ ವರದಿ ಬರುವದು ಬಾಕಿ ಇದೆ. ವರದಿ ಬಂದ ಕಾರ್ಮಿಕರ ಪೈಕಿ ಜೇವರಗಿ ತಾಲೂಕಿನ 3 ಜನ, ಶಹಾಪೂರ ತಾಲೂಕಿನ 54 ಜನ, ಮುದ್ದೇಬಿಹಾಳ ತಾಲೂಕಿನ 3 ಜನ ಹಾಗೂ ಹುಣಸಗಿ ತಾಲೂಕಿನ 138 ಜನ ಕಾರ್ಮಿಕರನ್ನು ಹುಣಸಗಿ ತಾಲೂಕು ಗ್ರೇಡ್-2 ತಹಶೀಲ್ದಾರ್ ಸುರೇಶ ಚವಲಕರ ಅವರ ಸಮ್ಮುಖದಲ್ಲಿ ಡಾ.ಪವನರಾವ್ ಮತ್ತು ಸಿಬ್ಬಂದಿ ಸೋಲಾರ್ ಸ್ಕ್ರೀನಿಂಗ್ ಮಾಡುವ ಮೂಲಕ ಕೈಗೆ 14 ದಿನಗಳ ಹೋಂ ಕ್ವಾರಂಟೈನ್ ಮೊಹರು ಹಾಕಿ ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ನೆಗೆಟಿವ್ ವರದಿ ಬಂದ 198 ಜನ ಕಾರ್ಮಿಕರಿಗೆ ದೃಢೀಕರಣ ಪ್ರಮಾಣ ಪತ್ರ ವಿತರಿಸಲಾಯಿತು.
ಉಪ ತಹಶೀಲ್ದಾರ್ ಮಹಾದೇವಪ್ಪಗೌಡ, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ, ಪಿಡಿಒ ಸಂಗಣ್ಣ, ಎಎಸ್ಐ ಭೀಮಾಶಂಕರ, ದತ್ತಾತ್ರೇಯ ಕುಲಕರ್ಣಿ, ಸಂಗಣ್ಣ, ರವಿ ಸೇರಿದಂತೆ ಆರೋಗ್ಯ, ಕಂದಾಯ, ಗ್ರಾಪಂ, ಪೊಲೀಸ್ ಇಲಾಖೆಗಳ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ