ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ: ರಾಜುಗೌಡ


Team Udayavani, Jan 5, 2021, 1:04 PM IST

ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ: ರಾಜುಗೌಡ

ಸುರಪುರ: ಗ್ರಾಪಂಗಳ ನೂತನ ಸದಸ್ಯರು ತಮ್ಮ ಹಿತಾಸಕ್ತಿ ಬದಿಗಟ್ಟು ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ನರಸಿಂಹ ನಾಯಕ ರಾಜುಗೌಡ ಕರೆ ನೀಡಿದರು.

ತಾಲೂಕಿನ ಬೈರಿಮಡ್ಡಿ ಗ್ರಾಮದಲ್ಲಿ ನೂತನ ಗ್ರಾಪಂ ಸದಸ್ಯರಿಗೆ ಏರ್ಪಡಿಸಿದ್ದ ಸನ್ಮಾನಸಮಾರಂಭದಲ್ಲಿ ಅವರು ಮಾತನಾಡಿ, ಜನಸೇವೆ ಮಾಡಲು ನಿಮಗೆ ಇದೊಂದು ಸುವರ್ಣ ಅವಕಾಶ ದೊರಕಿದೆ. ಈ ಅವಕಾಶವನ್ನು ಬಳಸಿಕೊಂಡುಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಬೇಕು ಎಂದು ಸಲಹೆ ನೀಡಿದರು.

ಜಿಪಂ ಮಾಜಿ ಸದಸ್ಯ ಎಚ್‌.ಸಿ. ಪಾಟೀಲಮಾತನಾಡಿ, ಶಾಸಕರು ಸಾಕಷ್ಟು ಕಷ್ಟಪಟ್ಟು ಅನುದಾನ ತರುತ್ತಿದ್ದಾರೆ. ಸದಸ್ಯರು ಅದರ ಸದ್ಬಳಕೆಮಾಡಿಕೊಳ್ಳಬೇಕು. ತಾರತಮ್ಯ, ಪಕ್ಷಪಾತ ಬಿಟ್ಟುಜನರಿಗೆ ಒಳ್ಳೆ ಆಡಳಿತ ಕೊಡಿ. ಮೂಲಭೂತಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ.ನಿಮ್ಮ-ನಿಮ್ಮ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಿ. ನಿಮ್ಮ ಪ್ರಾಮಾಣಿಕ ಸೇವೆಯಿಂದ ಗ್ರಾಮಗಳಅಭಿವೃದ್ಧಿ ಸಾಧ್ಯ ಎಂದು ಕಿವಿಮಾತು ಹೇಳಿದರು.

ಇದೇ ವೇಳೆ ಗ್ರಾಪಂ ನೂತನ ಸದಸ್ಯರಿಗೆ ಶಾಸಕರು ಶಾಲು ಹೊದಿಸಿ ಅಭಿನಂದಿಸಿದರು. ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪ ನಾಯಕ ತಾತಾ, ಮುಖಂಡರಾದ ಡಾ| ಬಿ.ಎಂ. ಹಳ್ಳಿ ಕೋಟಿ, ಬಲಭೀಮ ನಾಯ ಬೈರಿಮಡ್ಡಿ, ಶಂಕರ ನಾಯಕ,ಶರಣು ನಾಯಕ, ರವಿ ನಾಯಕ ಸೇರಿದಂತೆ ಪಕ್ಷದಇತರೆ ಮುಖಂಡರು ಇದ್ದರು. ವೆಂಕಟೇಶ ನಾಯಕ ಸ್ವಾಗತಿಸಿದರು. ಮಲ್ಲಿಕಾರ್ಜುನ ರೆಡ್ಡಿ ನಿರೂಪಿಸಿ, ವಂದಿಸಿದರು.

ಕನ್ನಡ ನಾಡು-ಭಾಷೆ ಉಳಿವಿಗೆ ಶ್ರಮಿಸಲು ಕರೆ :

ಯಾದಗಿರಿ: ನಾಡು ನುಡಿ, ಜಲ ರಕ್ಷಣೆ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಎಂದು ಶಾಂತಗೌಡ ಪಗಲಾಪೂರ ಹೇಳಿದರು.

ನಗರದ ನಗರದ ಮಾತೆ ಮಾಣಿಕೇಶ್ವರಿ ನಗರದಲ್ಲಿ ಆಂಜನೇಯ ದೇವಸ್ಥಾನ ಹತ್ತಿರ ಹಮ್ಮಿಕೊಂಡಿದ್ದ  ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ 11ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು,ರಾಜ್ಯದ ಗಡಿ ಭಾಗದಲ್ಲಿ ಬೇರೆ ರಾಜ್ಯದವರು ನಮ್ಮ ನಾಡಿನಸಂಪತ್ತು ಕುರಿತು ಕ್ಯಾತೆ ತೆಗೆದಾಗ ಕನ್ನಡಪರ ಸಂಘಟನೆಗಳು ಹೋರಾಟಗಳ ಪಾತ್ರ ಮರೆಯಲಾಗದು. ಕನ್ನಡಪರಸಂಘಟನೆಗಳ ನ್ಯಾಯಯುತವಾದ ಹೋರಾಟಕ್ಕೆ ನಾವೆಲ್ಲರೂ ಬೆಂಬಲಿಸಬೇಕೆಂದು ಕರೆ ನೀಡಿದರು.

ಇಂದಿನ ದಿನಗಳಲ್ಲಿ ಗಲ್ಲಿಗಲ್ಲಿಯಲ್ಲಿ ಕೇವಲ ತೋರಿಕೆಗೆ ಸಂಘಟನೆಗಳು ನಾಯಿಕೊಡಗಳಂತೆ ಉಟ್ಟಿಕೊಂಡುಪ್ರಚಾರಕ್ಕೆ ಸೀಮಿತವಾಗಿವೆ. ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಜಿಲ್ಲೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿದಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೂಲಕ ಇತರೆ ಸಂಘಟನೆಗಳಿಗೆ ಮಾದರಿಯಾಗಿದ್ದು, ಶ್ಲಾಘನೀಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಬಸವರಾಜ ಹೆಡಗಿಮದ್ರಾ ಮಾತನಾಡಿದರು. ಜಿಲಾಧ್ಯಕ್ಷ ರಾಜಶೇಖರ ಎದುರುಮನಿ ಅಧ್ಯಕ್ಷತೆ ವಹಿಸಿದ್ದರು. ದೇವಪುತ್ರಪ್ಪಮಾಳಿಕೇರಿ, ರಾಮಣ್ಣ ಗುಂಡಳ್ಳಿಕರ್‌, ಸಂಘಟನೆಯ ಪದಾಧಿಕಾರಿಗಳಾದ ಅರವಿಂದ ಗುಂಡಳ್ಳಿಕರ್‌, ನಿರಂಜನ, ಖುದ್ದುಸ್‌, ಮರೆಪ್ಪ ರಾಮದಾಸ್‌ ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.