ನಿಯಮ ಬಾಹಿರ ನಿವೇಶನ ಹಂಚಿಕೆ ಬೇಡ
Team Udayavani, Sep 1, 2022, 9:28 PM IST
ಶಹಾಪುರ: ನಗರ ಆಶ್ರಯ ಸಮಿತಿಯ ಅಧ್ಯಕ್ಷರು ಫಲಾನುಭವಿಗಳಿಂದ ಹಣ ಪಡೆದು, ಅರ್ಜಿ ಹಾಕಿಸಿ, ಪಟ್ಟಿ ತಯಾರಿಸಿದ್ದು, ಹಣ ನೀಡಿದವರ ಪಟ್ಟಿಯನ್ನೇ ಲಾಟರಿಯಲ್ಲಿ ಹಾಕಿ ಹಂಚಿಕೆ ಮಾಡುವ ಹುನ್ನಾರ ನಡೆಸಿದ್ದು ನಿಯಮ ಬಾಹಿರವಾಗಿದೆ. ಹೀಗಾಗಿ ನಿವೇಶನ ಹಂಚಿಕೆ ಮಾಡುವ ಕಾರ್ಯಕ್ರಮ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿಯಿಂದ ನಗರಸಭೆ ಎದುರು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಕ್ಕೆ ಅರ್ಜಿ ಕರೆದು ಒಂದು ವರ್ಷವಾಗಿದೆ. ಅಲ್ಲಿ ನಿವೇಶನ ಹಂಚಿಕೆ ಮಾಡುತ್ತಿರುವ ಜಾಗದಲ್ಲಿ ಯಾವುದೇ ಮೂಲ ಸೌಕರ್ಯಗಳು ಆಗಿಲ್ಲ. ಚರಂಡಿಯಾಗಲಿ, ರಸ್ತೆಯಾಗಲಿ, ವಿದ್ಯುತ್ ಕಂಬ, ನೀರಿನ ಸೌಲಭ್ಯ ಕನಿಷ್ಟ ಮೂಲ ಸೌಕರ್ಯಗಳು ಇಲ್ಲದ ಕಾರಣ, ತರಾತುರಿಯಾಗಿ ಹಂಚಿಕೆ ಮಾಡುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದರು.
2008ರಲ್ಲಿ ಬಸ್ ಡಿಪೋ ಹಿಂದುಗಡೆ 509 ಆಶ್ರಯ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಅದರಲ್ಲಿ 132 ಫಲಾನುಭವಿಗಳಿಗೆ ಖಾಲಿ ಹಕ್ಕು ಪತ್ರ ನೀಡಿ ನಿವೇಶನ ನೀಡಿರುವುದಿಲ್ಲ. ನಿವೇಶನ ನೀಡದೆ ಹಕ್ಕು ಪತ್ರ ಹೇಗೆ ನೀಡಿದರು ಎಂದು ಶಾಸಕರೆ ಇದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದರು.
ನಿಜವಾದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಲ್ಲಿ ನಮ್ಮದೇನು ತಕರಾರು ಇಲ್ಲ. ಆದರೆ ಸರಕಾರದ ನಿಯಮ ಗಾಳಿಗೆ ತೂರಿ ಏಕ ಪಕ್ಷಿಯವಾಗಿ ಸರ್ವಾಧಿಕಾರಿ ಧೋರಣೆಯಂತೆ ನಿವೇಶನ ನೀಡಲು ಮುಂದಾಗಿರುವುದಕ್ಕೆ ನಮ್ಮ ತಕರಾರು ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು