ಹೆಸರು ಇಲ್ಲ ಹಣವೂ ಇಲ್ಲ


Team Udayavani, Jan 11, 2018, 10:33 AM IST

yadgiri-1.jpg

ಯಾದಗಿರಿ: ರಾಜ್ಯ ಸರಕಾರ ರೈತರಿಗೆ ಅನುಕೂಲ ಆಗಲೆಂದು ಹೆಸರು, ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಆದರೆ ಈ ಖರೀದಿ ಕೇಂದ್ರದ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಹೆಸರು ಬೇಳೆ ಮಾರಾಟ ಮಾಡಿದ ರೈತನೊಬ್ಬ ಕಳೆದ ಆರು ತಿಂಗಳಿಂದ ಹಣ ದೊರೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲಾ ಕೇಂದ್ರದಿಂದ 15 ಕಿ.ಮೀ. ದೂರದಲ್ಲಿರುವ ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದ ರೈತ ಬಸವರಾಜ ವಿರುಪಣ್ಣ ಅವರು ತಮ್ಮ ಐದು ಎಕರೆ ಪೈಕಿ ನಾಲ್ಕು ಎಕರೆ ಜಮೀನಿನಲ್ಲಿ ಹೆಸರು ಬೆಳೆದಿದ್ದರು. ಜು. 13, 2017ರಂದು ತಾಲೂಕಿನ ಹತ್ತಿಕುಣಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಖರೀದಿ ಕೇಂದ್ರದಲ್ಲಿ 11.50 ಕ್ವಿಂಟಾಲ್‌ ಹೆಸರನ್ನು ರಾಜ್ಯ ಸರಕಾರದ ಬೆಂಬಲ ಬೆಲೆಯೊಂದಿಗೆ 5,375 ಹಾಗೂ ಕೇಂದ್ರ ಸರಕಾರದ ಬೆಂಬಲ ಬೆಲೆ 200 ರೂ. ಸೇರಿ ಪ್ರತಿ ಕ್ವಿಂಟಾಲ್‌ಗೆ 5,575 ರೂ.ಗೆ ಹೆಸರು ಮಾರಾಟ ಮಾಡಿದ್ದು, ಒಟ್ಟು 64112.5 ರೂ. ಅವರ ಖಾತೆಗೆ ಒಂದು ತಿಂಗಳೊಳಗೆ ಸಂದಾಯ ಮಾಡುತ್ತೇವೆ ಎಂದು ಖರೀದಿ ಕೇಂದ್ರ ಸಿಬ್ಬಂದಿಗಳು ತಿಳಿಸಿದ್ದರು. ಆದರೆ ಆರು ತಿಂಗಳು ಕಳೆದರೂ ಹಣ ಬ್ಯಾಂಕ್‌ ಖಾತೆಗೆ ಜಮಾವಾಗದೆ ರೈತ ಕಂಗಲಾಗಿದ್ದಾನೆ.

ಪಹಣಿ, ಆಧಾರ್‌ ಕಾರ್ಡ್‌, ಬೆಳೆ ವಿಮೆ ದೃಢೀಕರಣ ಪತ್ರ, ಬ್ಯಾಂಕ್‌ ಖಾತೆಯ ಪಾಸ್‌ ಬುಕ್‌ನ ನಕಲು ಪ್ರತಿ ಸೇರಿದಂತೆ
ಸಂಬಂಧಪಟ್ಟ ಎಲ್ಲ ದಾಖಲೆ ಪತ್ರಗಳನ್ನು ನೀಡಿದ್ದರು. ಆದರೂ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಿಲ್ಲ. ಈ ಬಗ್ಗೆ ಖರೀದಿ ಕೇಂದ್ರದ ಸಿಬ್ಬಂದಿಗಳಿಗೆ ಕೇಳಿದರೆ ಆನ್‌ಲೈನ್‌ನಲ್ಲಿ ಐಎಫ್‌ ಎಸ್‌ಸಿ ಕೋಡ್‌ ಎಸ್‌ಬಿಐಎನ್‌ ಬದಲು ಎಸ್‌ಬಿಐ ಎಂದು ನಮೋದಿಸಿದ್ದರಿಂದ ತಿರಸ್ಕೃತವಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸಿ ಹಣ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು ಎಂದು ಕಳೆದ ಒಂದು ತಿಂಗಳಿಂದ ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಜಮೆ ಮಾಡಿಲ್ಲ ಎಂದು ರೈತ ಬಸವರಾಜ ವಿರುಪಣ್ಣ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್‌, ಸಾಲ ಸೋಲ ಮಾಡಿ ಹೆಸರು ಬೆಳೆ ಬೆಳೆದಿದ್ದೇನೆ. ಕಳೆದ ಆರು ತಿಂಗಳಿಂದ ಹೆಸರು ಇಲ್ಲ. ಹಣವೂ ಇಲ್ಲವೆಂಬಂತಾಗಿದೆ. ಈ ರೀತಿಯಾದರೆ, ರೈತರು ಖರೀದಿ ಕೇಂದ್ರದಲ್ಲಿ ಬೆಳೆ ಮಾರಾಟಕ್ಕೆ ಹಿಂಜರಿಯುವಂತಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ನನ್ನ ಖಾತೆಗೆ ಹಣ ಜಮಾವಾಗಿಲ್ಲ. ಇದೇ ರೀತಿ 35 ರೈತರ ಸಮಸ್ಯೆ ಆಗಿದೆ ಎಂದು ತಮ್ಮ ನೋವು ತೋಡಿಕೊಂಡರು.
 
ರೈತರ ಅನುಕೂಲಕ್ಕಾಗಿ ರಾಜ್ಯ ಸರಕಾರ ಖರೀದಿ ಕೇಂದ್ರಗಳನ್ನು ಆರಂಭಿಸುತ್ತದೆ. ಅದರ ಜೊತೆಗೆ ರೈತರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯವಾದಾಗ ಮಾತ್ರ ಖರೀದಿ ಕೇಂದ್ರ ಸ್ಥಾಪಿಸಿದ್ದು, ಸಾರ್ಥಕವಾಗುತ್ತದೆ.

ಪಟ್ಟಿ ಪರಿಷ್ಕರಿಸಿ ಕ್ರಮ
ಆನ್‌ಲೈನ್‌ನಲ್ಲಿ ಐಎಫ್‌ಎಸ್‌ಸಿ ಕೋಡ್‌ ಎಸ್‌ಬಿಐಎನ್‌ ಬದಲು ಎಸ್‌ಬಿಐ ಎಂದು ನಮೋದಿಸಿದ್ದರಿಂದ ರೈತರ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಿಲ್ಲ. ಈಗ ತಪ್ಪಾಗಿರುವ ಪಟ್ಟಿಯನ್ನು ಪರಿಷ್ಕರಿಸಿ ಶಹಾಪುರದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಗೆ ಕಳುಹಿಸಿ ಕೊಡಲಾಗಿದೆ.
 ಸಂಜೀವಕುಮಾರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ, ಹತ್ತಿಕುಣಿ

ಮೂರ್‍ನಾಲ್ಕು ದಿನದಲ್ಲಿ ಸಮಸ್ಯೆಗೆ ಪರಿಹಾರ
ಖರೀದಿ ಕೇಂದ್ರದ ಸಿಬ್ಬಂದಿಗಳು ಆನ್‌ಲೈನ್‌ನಲ್ಲಿ ಐಎಫ್‌ಎಸ್‌ಸಿ ಕೋಡ್‌ ಎಸ್‌ಬಿಐಎನ್‌ ಬದಲು ಎಸ್‌ಬಿಐ ಎಂದು ನಮೋದಿಸಿದ್ದರಿಂದ ಸುಮಾರು 35 ರೈತರಿಗೆ ಹಣ ಸಂದಾಯವಾಗಿಲ್ಲ. ಇದು ನಮ್ಮ ಗಮನಕ್ಕೆ ಬಂದಿದೆ. ಎನ್‌ಇಎಂಎಲ್‌ಗೆ ಪರಿಷ್ಕೃತ ಲಿಸ್ಟ್‌ ಕಳುಹಿಸಲಾಗುತ್ತಿದ್ದು, ಮೂರ್‍ನಾಲ್ಕು ದಿನದಲ್ಲಿ ಸಮಸ್ಯೆ ಬಗೆಹರಿಸಿ ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು.
 ಭೀಮಣ್ಣ, ವ್ಯವಸ್ಥಾಪಕ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ

„ರಾಜೇಶ ಪಾಟೀಲ್‌ ಯಡ್ಢಳಿ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.