ಸಾಹಿತ್ಯಾಸಕ್ತರ ಆಶಯಕ್ಕೆ ಧಕ್ಕೆ ತರಲ್ಲ: ಅಳ್ಳುಂಡಿ
Team Udayavani, Dec 4, 2021, 5:54 PM IST
ಸಿಂಧನೂರು: ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ ಸದಸ್ಯರು ನನ್ನ ಮೇಲೆ ವಿಶ್ವಾಸ ಇಟ್ಟು ಚುನಾಯಿಸಿದ್ದು, ಅವರ ವಿಶ್ವಾಸಕ್ಕೆ ಧಕ್ಕೆ ಬರದ ರೀತಿಯಲ್ಲಿ ಕೆಲಸ ಮಾಡುವೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಹೇಳಿದರು.
ನಗರದ ಬಸವ ಪ್ರಸಾದ ನಿಲಯದಲ್ಲಿ ಬಸವ ಚಾರಿಟೇಬಲ್ ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ಶರಣೇ ನೀಲಾಂಬಿಕಾ ಜಯಂತಿ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆ ಸಮಾಜ ಕಟ್ಟಲು ಶ್ರಮಿಸಿದ್ದಾರೆ. ಜನಸಾಮಾನ್ಯರ ಭಾಷೆಯಲ್ಲಿ ವಚನಗಳನ್ನು ರಚಿಸುವ ಮೂಲಕ ಸಮಾಜದ ಪರಿವರ್ತಗೆ ನಾಂದಿ ಹಾಡಿದರು. ವಚನ ಸಾಹಿತ್ಯ ಅತ್ಯಂತ ಮೌಲ್ಯಯುತವಾದದ್ದು. ಬಸವಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಒಂದೇ ನಾಣ್ಯದ ಎರಡು ಮುಖಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.
ನೇತ್ರತಜ್ಞ ಡಾ| ಚನ್ನನಗೌಡ ಪಾಟೀಲ್ ಮಾತನಾಡಿ, ಶರಣರ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ. ನಾವು ಮಾಡುವ ಕೆಲಸದ ಬಗ್ಗೆ ಅರಿವಿರಬೇಕು. ಯಶಸ್ಸಿಗೆ ಪರ್ಯಾಯವಿಲ್ಲ. ಪರಿಶ್ರಮವೇ ಸಾಧನೆಗೆ ಪ್ರೇರಣೆ, ನಮಗೆ ನೆರವು ನೀಡಿದವರಿಗೆ ಕೃತಜ್ಞರಾಗಿರಬೇಕು ಎಂದರು.
ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಪಿ.ವೀರಭದ್ರಪ್ಪ ಕುರುಕುಂದಿ ಮಾತನಾಡಿದರು. ಪ್ರದೇಶ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ, ಜಿಪಂ ಮಾಜಿ ಸದಸ್ಯ ಎನ್. ಶಿವನಗೌಡ ಗೊರೇಬಾಳ, ನಗರ ಪೊಲೀಸ್ ಠಾಣೆಯ ಪಿಎಸ್ಐ ಸೌಮ್ಯ, ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಮಹಾಂತೇಶ ಮಸ್ಕಿ, ನಗರಸಭೆ ಮಾಜಿ ಅಧ್ಯಕ್ಷ ಶರಣಪ್ಪ ಟೆಂಗಿನಕಾಯಿ, ಕಸಾಪ ತಾಲೂಕು ನಿಕಪಟೂರ್ವ ಅಧ್ಯಕ್ಷೆ ಸರಸ್ವತಿ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ