ಸಾರ್ವಜನಿಕ ಸಮಸ್ಯೆಗೆ ತಕ್ಷಣ ಸ್ಪಂದಿಸಲು ಸೂಚನೆ
Team Udayavani, Jan 13, 2018, 4:00 PM IST
ಶಹಾಪುರ: ಬೇರೆ ಬೇರೆ ಗ್ರಾಮಗಳಿಂದ ಕಾರ್ಯದ ನಿಮಿತ್ತ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಸಂಬಂಧಿಸಿದ ಹಿರಿಯ ಅಧಿಕಾರಿಗಳ ಸಲಹೆ ಪಡೆದು ತಕ್ಷಣ ಅವರ ಸಮಸ್ಯೆಗೆ ಸ್ಪಂದಿಸುವ ಕೆಲಸ ನಡೆಯಬೇಕು ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸೂಚಿಸಿದರು. ನಗರದ ಹೊಸ ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷವಾಗಿ ಆಹಾರ ಇಲಾಖೆ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.
ಪಡಿತರ ಕಾರ್ಡಿನ ಬದಲಾವಣೆ ಕುರಿತಂತೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು ಮತ್ತು ತಕ್ಷಣವೇ ಸ್ಪಂದಿಸಿ ಸರ್ಕಾರದ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಪಡಿತರ ಕಾರ್ಡ್ ನೋಂದಣಿಯಾಗಬೇಕು. ಇಗ 65%
ಪ್ರತಿಶತ ಗುರಿ ತಲುಪಿದ್ದು, ಇನ್ನು 10% ಅವಕಾಶಗಳಿದ್ದು ಆಹಾರ ಸುರಕ್ಷತೆ ಕಾಯ್ದೆಯ ಅನ್ವಯದಂತೆ ಸರ್ಕಾರದ
ಯೋಜನೆ ಸಾರ್ಥಕವಾಗಲು ಅಗತ್ಯ ಕ್ರಮ ಕೈಗೊಳ್ಳಲು ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಜೆ. ಮಂಜುನಾಥ ಅವರಿಗೆ ತಿಳಿಸಿದರು.
ಪಹಣಿ ಪಡೆಯಲು ಮುಕ್ತ ಅವಕಾಶ: ಪಹಣಿ ಪಡೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದ್ದು, ತಹಶೀಲ್ದಾರ್ ಕಚೇರಿ ಸೇರಿದಂತೆ ಗಣಕೀಕೃತ ಕೇಂದ್ರಗಳಲ್ಲಿ ಪಹಣಿ ಲಭ್ಯವಾಗಲಿದ್ದು, ಕಳೆದ ಮೂರು ದಿನಗಳಿಂದ ವ್ಯವಸ್ಥೆಗೊಳಿಸಲಾಗಿದೆ. ಇನ್ನು ಮುಂದೆ ಪಹಣಿಗಾಗಿ ಕಾಯಬೇಕಿಲ್ಲವೆಂದು ಜನರಿಗೆ ತಿಳಿಸಿದರು.
ಸಕಾಲ ಸೇವೆ ಸಮರ್ಪಕವಾಗಿ ನಿರ್ವಹಿಸಿ: ತಹಶೀಲ್ದಾರ್ ಕಚೇರಿಯಲ್ಲಿರುವ ಸಕಾಲ ಸೇವೆಗೆ ಇರುವ ಕೇಂದ್ರದ ಬಗ್ಗೆ
ಅಸಮಾಧಾನ ವ್ಯಕ್ತಪಡಿಸಿದ ಅಧಿಕಾರಿಗಳು ಸೇವೆಯ ಸೌಲಭ್ಯ ಎಲ್ಲರಿಗೂ ದೊರಕುವಂತಾಗಬೇಕು. ಸೇವಾ ಕೇಂದ್ರ
ಸೌಲಭ್ಯಯುತವಾಗಿರಬೇಕು. ಈ ಕುರಿತಂತೆ ಸಂಬಂಧಿಸಿದವರು ಗಮನ ಹರಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಹಳೇ ತಹಶೀಲ್ದಾರ್ ಕಚೇರಿಯ ಉಪನೋಂದಣಾಧಿಕಾರಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಸಾರ್ವಜನಿಕರೊಂದಿಗೆ ಚರ್ಚಿಸುತ್ತ ಹಲವಾರು ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಅವಿನಾಶ ಮೆನನ್, ಸಹಾಯಕ ಆಯುಕ್ತ ಡಾ| ಜಗದೀಶ
ನಾಯಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ