ಕುಡಿಯುವ ನೀರಿಗಾಗಿ ಮುಂಜಾಗ್ರತೆ ವಹಿಸಲು ಸೂಚನೆ


Team Udayavani, Jan 4, 2018, 4:50 PM IST

yad-2.jpg

ಸುರಪುರ: ಬರುವ ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಾರದು. ಈ ಕುರಿತಂತೆ ನಗರಸಭೆ ಮುಂಜಾಗ್ರತೆ ವಹಿಸಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಇಲ್ಲಿಯ ನಗರಸಭೆಯ ಸಭಾಂಗಣದಲ್ಲಿ ಬುಧವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ, ಹಾಳಾದ ಪೈಪ್‌
ಲೈನ್‌ಗಳನ್ನು ಶೀಘ್ರ ರಿಪೇರಿ ಮಾಡಿ ಕೆಟ್ಟು ಹೋಗಿರುವ ಕೊಳವೆ ಬಾವಿ ಮತ್ತು ಕೈ ಪಂಪ್‌ಗಳನ್ನು ದುರಸ್ತಿಗೊಳಿಸಬೇಕು. ಅಗತ್ಯವಿರುವ ವಾರ್ಡ್‌ಗಳಲ್ಲಿ ಬೋರವೆಲ್‌ ಕೊರೆಸಬೇಕು.

ಅವಶ್ಯವಿದ್ದರೆ ಟ್ಯಾಂಕ್‌ರ ಮೂಲಕ ನೀರು ಸರಬರಾಜು ಮಾಡಬೇಕು. ವಿದ್ಯುತ್‌ ಸಮಸ್ಯೆ ಆಗದಂತೆ ನಿಗಾವಹಿಸಬೇಕು. ಒಟ್ಟಾರೆ ಬೇಸಿಗೆಯುದ್ದಕ್ಕೂ ನೀರಿನ ಸಮಸ್ಯೆ ಆಗದಂತೆ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ನಗರೋತ್ಥಾನ ಎರಡನೇ ಹಂತದಲ್ಲಿ 1.15 ಕೋಟಿ ರೂ. ಅನುದಾನ ಮಂಜುರಾಗಿದೆ. ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಇರುವ ವಿದ್ಯುತ್‌ ಸಮಸ್ಯೆಗಳನ್ನು ಹೋಗಲಾಡಿಸಬೇಕು. ಎಕ್ಸ್‌ಪ್ರೆಸ್‌ ಲೈನ್‌ಗೆ ಇರುವ ಅನಧಿಕೃತ ಸಂಪರ್ಕಗಳನ್ನು ಮುಲ್ಲಾಜಿಲ್ಲದೆ ಕಡಿತಗೊಳಿಸಬೇಕು. ಇಲ್ಲವಾದಲ್ಲಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವೀರಶೈವ ಕಲ್ಯಾಣ ಮಂಟಪದಿಂದ ಹಸನಾಪುರ ವೃತ್ತದವರೆಗೆ 80 ಲಕ್ಷ ರೂ. ವೆಚ್ಚದಲ್ಲಿ ಬೀದಿ ದೀಪದ ವ್ಯವಸ್ಥೆ ಮಾಡಲಾಗುತ್ತದೆ. ಶೆಳ್ಳಗಿ ಪೈಪ್‌ಲೈನ್‌ 1 ಕಿ.ಮೀ ವಿಸ್ತರಣೆ ಸಂಬಂಧ ಮುಖ್ಯಮುಂತ್ರಿ ಅವರಿಗೆ ಹೆಚ್ಚುವರಿ ಅನುದಾನ ಕೋರಿ ಮನವಿ ಸಲ್ಲಿಸಲಾಗಿದೆ. ಮಂಜೂರಾತಿ ನೀಡುವ ಭರವಸೆ ಸಿಕ್ಕಿದೆ. ನಗರಸಭೆಯ 27 ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳಿಗೆ ತೊಂದರೆ ಆಗದಂತೆ ನಿಗಾವಹಿಸಬೇಕು. ಯಾವುದೇ ಕಾರಣಕ್ಕೆ ಕುಡಿಯುವ ನೀರಿನ ವಿಷಯದಲ್ಲಿ ಲೋಪದೋಷ ಸಹಿಸುವುದಿಲ್ಲ ಎಂದು ಪೌರಾಯುಕ್ತ ಮತ್ತು ನೀರು ಸರಬರಾಜು ಸಿಬ್ಬಂದಿಗಳಗೆ ತಾಕೀತು ಮಾಡಿದರು.

ಪೌರಾಯುಕ್ತ ದೇವಿಂದ್ರ ಹೆಗಡೆ ಮಾತನಾಡಿ, ನಗರಸಭೆಯು ನಗರದ ನೀರಿನ ಸಮಸ್ಯೆಗೆ ಆದ್ಯತೆ ನೀಡಿದೆ. ಪ್ರತಿಯೊಂದು
ವಾರ್ಡ್‌ಗಳಿಗೆ ಕ್ರಮಬದ್ಧವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ವಾರ್ಡ್‌ಗಳನ್ನು ಬಯಲು ಶೌಚಾಲಯ ಮುಕ್ತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮುಂದುವರೆಸಲಾಗಿದೆ. 

ನಗರದಲ್ಲಿ 8,775 ಮನೆಗಳಿದ್ದು, ಆ ಪೈಕಿ 6,426 ಮನೆಗಳಲ್ಲಿ ಶೌಚಾಲಯವಿದೆ. 2,249 ಮನೆಗಳಲ್ಲಿ ಶೌಚಾಲಯಗಳಿಲ್ಲ. 9 ನೂರು ಶೌಚಾಲಯಗಳ ಅನುದಾನ ಲಭ್ಯವಿದೆ. ಶೀಘ್ರದಲ್ಲಿಯೇ ಎರಡನೆ ಹಂತದ ಹಣವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ. ವಾರ್ಡ್‌ ನಂ.5,7,8,11,18,19,20,21 ವಾರ್ಡ್‌ಗಳು ಬಯಲು ಶೌಚಾಲಯ ಮುಕ್ತವಾಗಿವೆ. ಇನ್ನುಳಿದವುಗಳಿಗೆ ನಗರಸಭೆ ಸದಸ್ಯರ ಸಹಕಾರ ನೀಡಬೇಕು ಎಂದು ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಆಡಳಿತ ಮತ್ತು ಪ್ರತಿ ಪಕ್ಷದ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ನಗರಸಭೆ ಅಧ್ಯಕ್ಷೆ ಕವಿತಾ ಎಲಿಗಾರ, ಉಪಾಧ್ಯಕ್ಷೆ ರಾಣಿ ಸರಿತಾನಾಯಕ ವೇದಿಕೆಯಲ್ಲಿದ್ದರು. ಸುರೇಶ ವಿಭೂತೆ ವರದಿ ವಾಚನೆ ಮಾಡಿದರು. ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರಾ, ಎಇಇ ಪರಶುರಾ ಮ, ಎಇ ಸುನೀಲನಾಯಕ. ಆರ್‌ಐ ವೆಂಕಟೇಶ, ಸುರೇಂದ್ರ ಕರಕಳ್ಳಿ ಮತ್ತು ಜೆಸ್ಕಾಂ ಅಧಿಕಾರಿಗಳು ಇದ್ದರು.

36 ಸಾವಿರ ವೆಚ್ಚದಲ್ಲಿ ಮೊಬೈಲ್‌ ಖರೀದಿ
36 ಸಾವಿರ ವೆಚ್ಚದಲ್ಲಿ ಅಧ್ಯಕ್ಷರಿಗೆ ಮೊಬೈಲ್‌ ಎಂದು ಖರ್ಚಿನಲ್ಲಿ ತೋರಿಸಲಾಗಿದೆ. ಇದು ಯಾವ ಆಧಾರದಲ್ಲಿ ಕೊಡಿಸಿದ್ದೀರಿ. ಟ್ಯಾಂಕರ್‌ ನೀರಿನ ಸರಬರಾಜು ಸೇರಿದಂತೆ ಇತರೆ ಖರ್ಚು ವೆಚ್ಚದಲ್ಲಿ ಅನುಮಾನ ಕಂಡು ಬರುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಆಕ್ಷೇಪಣೆ ಎತ್ತಿದರು. ಇದಕ್ಕೆ ಪಕ್ಷ ಭೇದ ಮರೆತು ಎಲ್ಲಾ ಸದಸ್ಯರು ಧ್ವನಿಗೂಡಿಸಿದರು. ಪೌರಾಯುಕ್ತರು ಸಮರ್ಪಕವಾಗಿ ಉತ್ತರಿಸಲು ತಡಬಡಾಯಿಸಿದರು. ಶಾಸಕರು ಮಧ್ಯ ಪ್ರವೇಶಿಸಿ ಈ ಬಗ್ಗೆ ನಂತರ ಪರಿಶೀಲಿಸೋಣ ಎಂದು ಹೇಳಿ ವಾತಾವರಣ ತಿಳಿಗೊಳಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.