ಅಧಿಕಾರಿಗಳ ಗೈರು: ದಲಿತ ಮುಖಂಡರ ಆಕ್ರೋಶ
Team Udayavani, Apr 1, 2022, 3:34 PM IST
ಸುರಪುರ: ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದಲಿತರಿಗೆ ಮಾತ್ರವಲ್ಲ ಎಲ್ಲಾ ಸಮಾಜದವರಿಗೆ ಅಗತ್ಯವಾಗಿದ್ದಾರೆ. ಕೇವಲ ದಲಿತರನ್ನು ಕರೆದು ಸಭೆ ಮಾಡುವುದರಲ್ಲಿ ಅರ್ಥವಿಲ್ಲ. ಸರಕಾರವೇ ಈ ರೀತಿ ಮಾಡಿದರೆ ಹೇಗೆ? ಮೇಲಾಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಾರೆ. ಇತರೆ ಸಮಾಜದವವರು, ವಿವಿಧ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಿ ಸಭೆ ಮಾಡಿ ಸದ್ಯಕ್ಕೆ ಸಭೆ ಮುಂದೂಡುವಂತೆ ದಲಿತ ಮುಖಂಡರು ಒತ್ತಾಯಿಸಿದರು.
ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಗುರುವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರ ಕೋರಿಕೆ ಮೇರೆಗೆ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಸಭೆ ಮುಂದೂಡುವುದಾಗಿ ತಿಳಿಸಿದರು.
ಗ್ರೇಡ್-2 ತಹಶೀಲ್ದಾರ್ ಮಲ್ಲಯ್ಯ, ತಾಪಂ ಇಒ ಅಮರೇಶ, ಪಿಐ ಸುನೀಲ್ ಕುಮಾರ ಮೂಲಿಮನಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ, ಸಿಡಿಪಿಒ ಲಾಲ್ ಸಾಬ್ ಪೀರಾಪುರ, ಎಸ್ಟಿಒ ಡಾ| ಮೋನಪ್ಪ ಸಿರವಾಳ, ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿ ಮೊಹ್ಮದ್ ಸಲೀಂ, ಅಲ್ಪಸಂಖ್ಯಾತರ ಇಲಾಖೆ ಸಂಗೀತಾ ಮಾಡ್ಯಾಳ, ದಲಿತ ಮುಖಂಡರಾದ ನಾಗಣ್ಣ ಕಲ್ಲದೇವನಹಳ್ಳಿ, ಮಾನಪ್ಪ ಕಟ್ಟಿಮನಿ, ವೆಂಕಟೇಶ ಹೊಸ್ಮನಿ, ಭೀಮರಾಯ ಸಿಂದಗೇರಿ, ಶಿವಲಿಂಗ ಹಸನಾಪುರ, ರಾಹುಲ್ ಹುಲಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು