30ರಂದು ಶ್ರೀ ಛಾಯಾ ಭಗವತಿ ಜಾತ್ರೆಗೆ ಚಾಲನೆ


Team Udayavani, Apr 27, 2022, 2:34 PM IST

15faire

ನಾರಾಯಣಪುರ: ಕೃಷ್ಣಾ ನದಿ ತೀರದ ದಕ್ಷಿಣ ಕಾಶಿ ಶ್ರೀ ಛಾಯಾ ಭಗವತಿ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರ ಪುರೋಹಿತರ ನೇತೃತ್ವದಲ್ಲಿ ಐದು ದಿನಗಳ ಕಾಲ ನಡೆಯುವ ಪವಿತ್ರ ಯಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪುರಾಣ ಪ್ರಸಿದ್ಧ ಕ್ಷೇತ್ರದಲ್ಲಿ ಶ್ರೀಛಾಯಾ ದೇವಿಯೂ ಸೂರ್ಯ ದೇವರಿಗಾಗಿ ಕಠಿಣ ತಪಸ್ಸುಗೈದು ಸೂರ್ಯ ದೇವರನ್ನು ಪತಿಯಾಗಿ ಪಡೆದಳು, ಕ್ಷೇತ್ರದ ಮಹಿಮೆ ಸಾರುವ ಅಕ್ಷಯ ತೃತೀಯ ದಿನ ದೇಗುಲದ ಗರ್ಭಗುಡಿಯ ಶ್ರೀಛಾಯಾ ಭಗವತಿಯ ಪಾದುಕೆಗಳಿಗೆ ಸೂರ್ಯ ದೇವನ ಪ್ರಥಮ ಕಿರಣ ಬೀಳುವುದೇ ಅತ್ಯದ್ಬುತ ದೃಶ್ಯವಾಗಿದೆ ಇಂತಹ ಕ್ಷೇತ್ರದ ಮಹಿಮೆಯ ಕುರಿತು ಸ್ಕಂದ ಪುರಾಣದಲ್ಲಿ ಉಲ್ಲೇಖವಿದ್ದು, ಇಂತಹ ವಿಶಿಷ್ಟತೆಗೆ ಹೆಸರುವಾಸಿಯಾದ ಪುಣ್ಯ ಕ್ಷೇತ್ರಕ್ಕೆ ದೇವಿಯ ದರ್ಶನಕ್ಕೆ ಅಪಾರ ಭಕ್ತರು ಆಗಮಿಸುತ್ತಾರೆ.

ಯಾತ್ರಾ ಮಹೋತ್ಸವ ಹಾಗೂ ಕಾರ್ಯಕ್ರಮವು ಏ. 30ರಿಂದ 5ದಿನಗಳ ಕಾಲ ನಡೆಯಲಿದ್ದು ಕಾರ್ಯಕ್ರಮ ಯಶಸ್ವಿಗೊಳಿಸುವುದು ಹಾಗೂ ಮೇ 3ರ ಮಂಗಳವಾರ ಅಕ್ಷಯ ತೃತೀಯ ದಿನದಂದು ಕ್ಷೇತ್ರ ಪುರೋಹಿತರ ನೇತೃತ್ವದಲ್ಲಿ 18 ತೀರ್ಥಗಳಲ್ಲಿ ಭಕ್ತರ ಪವಿತ್ರ ಸ್ನಾನ ಗೈಯುವ ವಿಶೇಷ ಕಾರ್ಯಕ್ರಮದ ತಯಾರಿಗೆ ದೇಗುಲ ಅರ್ಚಕ ವರ್ಗ ಅಣಿಯಾಗುತ್ತಿದ್ದಾರೆ.

ಏ. 30 ಶನಿವಾರ ಅಮಾವಾಸ್ಯೆ ಬೆಳಗ್ಗೆ 5ಗಂಟೆಗೆ ಸುಪ್ರಭಾತ, ವೇದ ಘೋಷ ನಂತರ ದೇವಿಗೆ ಅಭಿಷೇಕ, ಘಟಸ್ಥಾಪನೆ, ಕ್ಷೇತ್ರ ಉಪವಾಸದೊಂದಿಗೆ ಶ್ರೀ ಛಾಯಾ ಭಗವತಿ ಯಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಮೇ 1ರಂದು ವೈಶಾಖ ಶು. ಪ್ರತಿಪದ ಕ್ಷೇತ್ರ ಉಪವಾಸ ಮೇ 2ರಂದು ಶ್ರಾದ್ಧ ವಿಧಿ, ಪಿಂಡ ಪ್ರಧಾನ ನೆರವೇರಲಿದ್ದು ಅಂದು ಸಂಜೆ ಸಂಗೀತ ಸೇವೆ, ದಾಸ ವೈಭವ, ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ಜರುಗಲಿವೆ.

ಮೇ 4ರಂದು ಘಟವಿಸರ್ಜನೆ, ಗಂಗಾರಾಧನೆಯೊಂದಿಗೆ ಯಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. ಶ್ರೀಛಾಯಾ ಭಗವತಿ ಕ್ಷೇತ್ರವು ಪುರಾಣ ಪ್ರಸಿದ್ಧ ಪುಣ್ಯ ಭೂಮಿಯಾಗಿದ್ದು, ದೂರದೂರುಗಳಿಂದ ಅಪಾರ ಭಕ್ತರು ಸುಕ್ಷೇತ್ರಕ್ಕೆ ಆಗಮಿಸಿ ಅಕ್ಷಯ ತೃತೀಯ ದಿನದಂದು 18 ತೀರ್ಥಗಳಲ್ಲಿ ಪವಿತ್ರ ಸ್ನಾನಗೈದು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸುತ್ತಾರೆ.

ಮೇ 3ರಂದು ಅಕ್ಷಯ ತೃತೀಯ ದಿನದಂದು ಶ್ರೀ ಛಾಯಾ ಭಗವತಿ ಕ್ಷೇತ್ರದಲ್ಲಿರುವ 18 ತೀರ್ಥಗಳಲ್ಲಿ ಪವಿತ್ರ ಸ್ನಾನ ಮಾಡಿದರೆ ವಿಶಿಷ್ಟ ಫಲ ಲಭಿಸಲಿದೆ ಎಂಬುದು ಭಕ್ತರ ನಂಬಿಕೆಯಾಗಿದ್ದು, ತೀರ್ಥ ಸ್ನಾನದ ಬಳಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಸಂತ ಪೂಜೆ, ಶ್ರೀದೇವಿಗೆ ಬಾಗಿಣ ಅರ್ಪಣೆ ತೀರ್ಥ ಪ್ರಸಾದ ನೆರವೇರಲಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸುಕ್ಷೇತ್ರಕ್ಕೆ ಆಗಮಿಸಿ ಪವಿತ್ರ ಸ್ನಾನದಲ್ಲಿ ಪಾಲ್ಗೊಳ್ಳುವದು ವಿಶೇಷ. -ಚಿದಂಬರಭಟ್‌ ಜೋಶಿ, ಅರ್ಚಕರು ಶ್ರೀ ಛಾಯಾ ಭಗವತಿ ಕ್ಷೇತ್ರ

-ಬಸವರಾಜ ಎಂ. ಶಾರದಳ್ಳಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.