ಟೈರ್ಗೆ ಬೆಂಕಿ ಹಚ್ಚಿ ಕರವೇ ಆಕ್ರೋಶ
Team Udayavani, Jan 26, 2018, 5:10 PM IST
ಶಹಾಪುರ: ಕನ್ನಡಪರ ಸಂಘಟನೆಗಳು ಮಹದಾಯಿ ಯೋಜನೆ ಜಾರಿಗಾಗಿ ಕರ್ನಾಟಕ ಬಂದ್ ಕರೆ ನೀಡಿರುವ
ಹಿನ್ನೆಲೆಯಲ್ಲಿ ಇಲ್ಲಿನ ತಾಲೂಕು ಕನ್ನಡಪರ ಸಂಘಟನೆಗಳ ಒಕ್ಕೂಟ ವತಿಯಿಂದ ಗುರುವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿ ಅವರಿಗೆ
ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ದೇವು ಬಿ.ಗುಡಿ, ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಮಹದಾಯಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯದ ಆಶಯ ಈಡೇರುತ್ತಿಲ್ಲ. ಆದರೆ ಇದು ರಾಜಕೀಯ ವಿಷಯವಾಗಿ ಪರಿವರ್ತನೆಯಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗದ ಜನರಿಗೆ ಕುಡಿಯಲು ನೀರಿ ಅಗತ್ಯವಿದೆ. ಮಹದಾಯಿ ನದಿ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪರಿಪರಿಯಾಗಿ
ಕೇಳುವ ಸ್ಥಿತಿ ಬಂದಿದೆ. ಇದಕ್ಕೆ ಕಾರಣ ರಾಜಕೀಯ ಮೇಲಾಟ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೋವಾ ಸರಕಾರ ಕುಡಿಯುವ ನೀರು ಹರಿಸಲು ಅಡ್ಡಗಾಲು ಹಾಕುತ್ತಿದೆ. ಕುಡಿಯುವ ನೀರು ಬೇಡುವ ಹಕ್ಕು ನಮಗಿದೆ. ಮಹದಾಯಿ ನದಿ ನೀರು ಕರ್ನಾಟಕದ ಪಾಲಿಗೂ ಆಶಾಕಿರಣವಾಗಿದೆ. ನಮ್ಮ ಪಾಲಿನ ನೀರು ಕರ್ನಾಟಕಕ್ಕೆ ಒದಗಿಸಬೇಕೆಂದು ಆಗ್ರಹಿಸಿದರು. ಮಹದಾಯಿ ವಿವಾದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಬಸವೇಶ್ವರ ವೃತ್ತದಲ್ಲಿ ಟೆ„ರ್ ಗೆ ಬೆಂಕಿ ಹಚ್ಚುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮುಂಚಿತವಾಗಿ
ಚರಬಸವೇಶ್ವ ಕಮಾನದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಯಾವುದೇ ಬಂದ್ ಆಚರಣೆ ನಡೆಯಲಿಲ್ಲ. ಆದರೆ ಕನ್ನಡಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಬೋನೇರ್, ಮಲ್ಲಿಕಾರ್ಜುನ ನಗನೂರ, ಮೌನೇಶ ಹಳಿಸಗರ,
ಭೀಮರಾಯ ಕಾಂಗ್ರೆಸ್, ವಿರೇಶ ಅಂಗಡಿ, ಅಮರೇಶಗೌಡ ಸಗರ, ವಿಜಯ ಚಿಗಿರಿ, ನಿಂಗು ಶಹಾಪುರ, ನಾಗರಾಜ ದೊರಿ, ನಿಂಗಣ್ಣ ಟಣಕೆದಾರ, ಶರಣು ಮದ್ರಿಕಿ, ಲೋಕನಾಥ ದೋರನಹಳಿ, ಮಹಾದೇವ ಮದ್ರಿಕಿ, ದೇವು ಸೂಗೂರ, ಯಲ್ಲಪ್ಪ ಸಗರ, ಮಲ್ಲಾರಾವ್ ಕುಲಕರ್ಣಿ, ಮರಿಲಿಂಗ ಸಗರ, ನಿಂಗು ತಿಮ್ಮಾಪುರ, ಸಾಬರಡ್ಡಿ ಸಗರ, ಪರಶುರಾಮ ಸಗರ, ದಂಡಪ್ಪ ಸಗರ, ರಾಜು ಶರಣು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ