ಭರದಿಂದ ಸಾಗಿದ ಪುಸ್ತಕ-ಸಮವಸ್ತ್ರ ಸರಬರಾಜು


Team Udayavani, Jun 8, 2018, 2:23 PM IST

yad-2.jpg

ಸುರಪುರ: ಪ್ರತಿ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಗಳಿಗೆ ಸರಬರಾಜು ಮಾಡುವ ಪುಸ್ತಕ ವಿತರಣೆಯಲ್ಲಿ ಒಂದಿಲ್ಲ ಒಂದು ಸಮಸ್ಯೆ ಉಂಟಾಗಿ ವಿತರಣೆ ವಿಳಂಬ ಆಗುತ್ತಿತ್ತು. ಆದರೆ 2018-19ನೇ ಸಾಲಿನ ಪುಸ್ತಕ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲದೆ ಎಲ್ಲ ಶಾಲೆಗಳಿಗೆ ಪುಸ್ತಕ ವಿತರಣೆ ಕಾರ್ಯ ಭರದಿಂದ ಸಾಗಿದೆ.

1ರಿಂದ ಎಸ್‌ಎಸ್‌ಎಲ್‌ಸಿವರೆಗೆ ಇಲಾಖೆಯಿಂದ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಿದರೆ, ಅನುದಾನ ರಹಿತ ಶಾಲೆಗಳಿಗೆ ಸಬ್ಸಿಡಿ ದರದಲ್ಲಿ ಪುಸ್ತಕ ವಿತರಿಸಲಾಗುತ್ತಿದೆ. ಪ್ರತಿ ವರ್ಷ ಕೆಲ ವಿಷಯಗಳ ಪುಸ್ತಕಗಳು ಸಕಾಲಕ್ಕೆ ಸರಬರಾಜು ಆಗದ ಕಾರಣ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಮಸ್ಯೆ ಎದುರಿಸುತ್ತಿದ್ದರು. ಈ ಬಾರಿ ಬೇಡಿಕೆಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ ವರೆಗಿನ ಎಲ್ಲ ವಿಷಯವಾರು ಪುಸ್ತಕಗಳು ಸಮರ್ಪಕವಾಗಿ ಸರಬರಾಜು ಆಗಿರುವುದು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ನಿಟ್ಟುಸಿರು ಬಿಡುವಂತೆ ಆಗಿದೆ.

ಉರ್ದು ಮತ್ತು ಕನ್ನಡ ಮಾಧ್ಯಮ ಸೇರಿ ತಾಲೂಕಿಗೆ ಒಟ್ಟು 4,35,175 ಪುಸ್ತಕಗಳ ಬೇಡಿಕೆ ಇತ್ತು. ಈ ಪೈಕಿ 3,52,451 ಪುಸ್ತಕಗಳು ಸರಬರಾಜು ಆಗಿವೆ. 1ರಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಉರ್ದು ಮಾಧ್ಯಮದ ಕೆಲ ವಿಷಯಗಳ ಪುಸ್ತಕಗಳು ಇನ್ನು ಬಂದಿಲ್ಲ. ಶೇ. 70ರಷ್ಟು ಪುಸ್ತಕಗಳ ಕೊರತೆ ಇದೆ. ಕನ್ನಡ ಮಾಧ್ಯಮ ಪುಸ್ತಕಗಳಿಗೆ ಯಾವುದೇ ಕೊರತೆ ಇಲ್ಲ.
 
ಖಾಸಗಿ ಶಾಲೆಗಳು ಒಟ್ಟು 10,3073 ಪುಸ್ತಕಗಳ ಬೇಡಿಕೆ ಸಲ್ಲಿಸಿದ್ದು, ಈ ಪೈಕಿ 90,1315 ಸರಬರಾಜು ಆಗಿವೆ. ಆಯಾ ಶಾಲೆಗಳ ಬೇಡಿಕೆಗಳಿಗೆ ಅನುಗುಣವಾಗಿ ಪುಸ್ತಕ ಸರಬರಾಜು ಮಾಡಲಾಗಿದೆ. ಈಗಾಗಲೇ 26 ಕ್ಲಸ್ಟರ್‌ಗಳಿಗೆ ವಿತರಿಸಲಾಗಿದ್ದು, ಕೇವಲ ಎರಡು ಕ್ಲಸ್ಟರ್‌ಗಳಿಗೆ ಮಾತ್ರ ವಿತರಣೆ ಬಾಕಿ ಇದೆ. ಇನ್ನೆರಡು ದಿನಗಳಲ್ಲಿ ಸರಬರಾಜು
ಮುಗಿಯಲಿದೆ ಎಂದು ಶಿಕ್ಷಣ ಸಂಯೋಜಕ ಸುಭಾಸ ತಿಳಿಸಿದ್ದಾರೆ. 

ಸಮವಸ್ತ್ರ ವಿತರಣೆ: 32,302 ಬಾಲಕರು. 31,086 ಬಾಲಕಿಯರು ಸೇರಿದಂತೆ ಒಟ್ಟು 63,388 ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಈ ಪೈಕಿ ಈಗ 1ರಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಬಾಲಕರ ಸಮವಸ್ತ್ರ ಪೂರೈಕೆ ಆಗಿದ್ದು, ಆಯಾ ಶಾಲೆಗಳಲ್ಲಿ ವಿತರಣೆ ಕಾರ್ಯ ನಡೆದಿದೆ. 8, 9, 10ನೇ ತರಗತಿ ಬಾಲಕಿಯರ ಸಮವಸ್ತ್ರ ಇನ್ನು ಸರಬರಾಜು ಆಗಿಲ್ಲ ಎಂದು ತಿಳಿದು ಬಂದಿದೆ.

ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಪ್ರಸಕ್ತ ಸಾಲಿನಲ್ಲಿ ಶಾಲೆ ಆರಂಭಕ್ಕೂ ಮುನ್ನವೇ ಸಮರ್ಪಕವಾಗಿ ಪುಸ್ತಕ ಮತ್ತು ಸಮವಸ್ತ್ರ ಸರಬರಾಜು ಆಗಿರುವುದು ಸಂತಸ ತಂದಿದೆ. ಆಯಾ ಶಾಲೆಗಳ ಬೇಡಿಕೆಗೆ ಅನುಗುಣವಾಗಿ ಈಗಾಗಲೇ ಎಲ್ಲ ಶಾಲೆಗಳಿಗೆ ಪುಸ್ತಕ, ಸಮವಸ್ತ್ರ ವಿತರಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಶಾಲೆಗೆ ಬರಲು ಕ್ರಮ ಕೈಗೊಳ್ಳಲಾಗುವುದು.  
 ನಾಗರತ್ನಾ ಓಲೇಕಾರ, ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.