ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲಿ: ಕಲ್ಮಠ ಶ್ರೀ


Team Udayavani, Feb 25, 2019, 11:08 AM IST

yad-3.jpg

ಸೈದಾಪುರ: ಮಗುವಿಗೆ ಸಂಸ್ಕಾರ ಕೊಟ್ಟರೆ ಉತ್ತಮ ನಾಗರಿಕನಾಗುತ್ತಾನೆ. ಆ ವಿವಿಧ ಶಕ್ತಿ ಗುರುಗಳಲ್ಲಿ ಇರುತ್ತದೆ ಎಂದು ಮಾನವಿ ಕಲ್ಮಠದ ವೀರೂಪಾಕ್ಷ ಪಂಡಿತಾರಾಧ್ಯ ಮಹಾಸ್ವಾಮೀಜಿ ಹೇಳಿದರು. ಇಲ್ಲಿನ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ 1987-88ನೇ ಸಾಲಿನ ವಿದ್ಯಾರ್ಥಿಗಳಿಂದ ಹಮ್ಮಿಕೊಂಡ ಗುರುವಂದನೆ, ಸ್ನೇಹ ಸಮ್ಮೇಳನ ಹಾಗೂ ಶೈಕ್ಷಣಿಕ ಚಿಂತನೆ ಮತ್ತು ದೇಣಿಗೆ ಅರ್ಪಿಸುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬದುಕಿನಲ್ಲಿ ಸುಖ ದುಃಖ ಎರಡು ದಡಗಳಿರುತ್ತವೆ. ಈ ಎರುಪೇರುಗಳನ್ನು ದೂರ ಮಾಡಿ ಜೀವನ ರೂಪಿಸಿಕೊಳ್ಳುವ ತಾಕತ್ತು ನಮ್ಮಲ್ಲಿದೆ. ಈ ದಿಸೆಯಲ್ಲಿ ನಾವು ಪ್ರಯತ್ನ ಮಾಡಬೇಕು ಎಂದು ಕಿವಿ ಮಾತುಗಳನ್ನು ಹೇಳಿದರು.

ಕಲಬುರುಗಿ ಕೆಎಸ್‌ಆರ್‌ಪಿ, ಡಿವೈಎಸ್‌ಪಿ ಗುರುನಾಥ ಮಾತನಾಡಿ, ತಂದೆ ತಾಯಿರಂತೆ ಗುರವಿಗೂ ಪ್ರಮುಖ ಸ್ಥಾನ ನೀಡಬೇಕು ಎಂದು ಕಿವಿ ಮಾತು ಹೇಳಿದರು.
 
ಸಂಸ್ಥೆಯ ಅಧ್ಯಕ್ಷ ಬಸವರಾಜ ಪಾಟೀಲ ಕ್ಯಾತನಾಳ ಮಾತನಾಡಿ, ಯುವ ಜನಾಂಗ ದಾರಿ ತಪ್ಪುತ್ತಿದೆ. ಅವರಿಗೆ ಮಾರ್ಗದರ್ಶನ ಮಾಡುವ ಕೆಲಸವಾಗಬೇಕು. ಶಿಕ್ಷಣದ ಮೂಲಕ ವಿದ್ಯೆಯೊಂದಿಗೆ ಗುಣವಂತ ಆರೋಗ್ಯವಂತ ಉತ್ತಮ ನಾಗರಿಕರನ್ನಾಗಿ ಮಾಡುವ ಪ್ರಯುತ್ನ ನಾವು ಮಾಡಬೇಕು ಎಂದು ಹೇಳಿದರು.

1987-88ನೇ ಸಾಲಿನ ವಿದ್ಯಾರ್ಥಿಗಳಾದ ಶರಣಗೌಡ ಶೆಟ್ಟಿಹಳ್ಳಿ, ಸೀತಮ್ಮ, ವೆಂಕಟೇಶ ಜೋಶಿ, ಪದ್ಮಾವತಿ, ರಮೇಶ ಕುಲಕರ್ಣಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಇದಕ್ಕೂ ಮುಂಚೆ ನಿವೃತ್ತಿ ಹೊಂದಿದ ವೀರಣ್ಣ ಸಾಹು, ಬಿ.ಬಿ. ಹೆಬ್ಟಾಳೆ, ವೆಂಕಟಣ್ಣ ಅಲೆಮನಿ, ಶರಣಪ್ಪ ಸಾತನೂರಕರ ಸೇರಿದಂತೆ ಸೇವೆ ಸಲ್ಲಿಸಿದ ಇನ್ನೂಳಿದ ಕುಟಂಬ ವರ್ಗಕ್ಕೆ ಗುರವಂದನಾ ಗೌರವ ಸಮರ್ಪಣೆ ಅಂಗವಾಗಿ ವಿಶೇಷ ಸನ್ಮಾನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಾಹಿತಿ ಸಾಹೇಬಗೌಡ ಬಿರದಾರ, ಮುಖ್ಯಗುರು ಲಿಂಗಾರಡ್ಡಿ ನಾಯಕ, ಪ್ರಾಂಶುಪಾಲ ಜಿ.ಎಂ. ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, 1987-88ನೇ ಸಾಲಿನ ವಿದ್ಯಾರ್ಥಿಗಳ ಪದಾಧಿಕಾರಗಳಾದ ನಿರಂಜನರಡ್ಡಿಗೌಡ ಶೆಟ್ಟಹಳ್ಳಿ, ಮಲ್ಲಣ್ಣಗೌಡ ಮುನಾಗಾಲ, ಚಂದ್ರಯ್ಯಗೌಡ, ಮಹಿಳಾ ಪ್ರತಿನಿಧಿ ಸೀತಮ್ಮ ಸೇರಿದಂತೆ ಇತರರು ವೇದಿಕೆ ಮೇಲಿದ್ದರು.

ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, 1987-88ನೇ ಸಾಲಿನ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು. ಅರ್ಚನಾ ಪ್ರಾರ್ಥಾನಾ ಗೀತೆ ಹಾಡಿದಳು. ಶಾಂತಗೌಡ ಬಾಡಿಯಾಲ ಸ್ವಾಗತಿಸಿದರು. ಮಲ್ಲಕಾರ್ಜುನ ಗುಡೆಬಲ್ಲೂರು ನಿರೂಪಿಸಿದರು.

ಗುರುಗಳ ಜೊತೆಗೆ ವಿದ್ಯಾರ್ಥಿಗಳ ಪ್ರಯತ್ನವೂ ಅತೀ ಮುಖ್ಯವಾಗಿದೆ. ಕೆಲವು ಸಂದರ್ಭಗಳು ನಮ್ಮ ವೈಪಲ್ಯಕ್ಕೆ ಕಾರಣ ಆಗುತ್ತವೆ. ಆದರೂ ನಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕಿದೆ. ನೀವು ಕಲಿತ ಗುರುಗಳಿಗೆ ಮಾಡಿರುವ ಸನ್ಮಾನ ದೇಶದ ಎಲ್ಲಾ ಪ್ರಶಸ್ತಿಗಳಿಗಿಂತ ದೊಡ್ಡದಾಗಿರುವುದೆ ಇದಕ್ಕೆ
ಉದಾಹರಣೆಯಾಗಿದೆ.
 ನಿವೃತ್ತ ಹಿರಿಯ ಶಿಕ್ಷಕ, ವೆಂಕಣ್ಣ ಅಲೆಮನಿ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.