ಓದಿನೊಂದಿಗಿರಲಿ ದೇಶಾಭಿಮಾನ
Team Udayavani, Dec 27, 2021, 3:57 PM IST
ಹುಣಸಗಿ: ಅಧ್ಯಯನದ ಜತೆಗೆ ದೇಶಾಭಿಮಾನವೂ ವಿದ್ಯಾರ್ಥಿಗಳಲ್ಲಿ ಬರಬೇಕು. ಆಗ ಮಾತ್ರ ಸಮೃದ್ಧ ದೇಶ ಕಟ್ಟಲು ಸಾಧ್ಯ ಎಂದು ಡಿವೈಎಸ್ಪಿ ಡಾ| ದೇವರಾಜ ಹೇಳಿದರು.
ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ದೇಶ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ಕುರಿತು ಅವರು ಮಾತನಾಡಿದರು. ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರಂತಹ ಮಹಾತ್ಮರ ತತ್ವ-ಸಂದೇಶ ಜೀವನದಲ್ಲಿ ಮೈಗೂಡಿಸಿಕೊಳ್ಳುವುದರೊಂದಿಗೆ ನೆಲ-ಜಲ, ಜನೋಪಯೋಗಿ ಹೊಸ ಆವಿಷ್ಕಾರ ದೇಶಕ್ಕೆ ಸಮರ್ಪಿಸುವಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ ಎಂದರು.
ಡಾ| ವೀರಭದ್ರ ಹೊಸಮನಿ ಮಾತನಾಡಿ, ಏಕಾಗ್ರತೆ ಸಾಧಿಸುವ ಛಲ ನಮ್ಮಲ್ಲಿದ್ದರೆ ಏನಾದರೂ ಸಾಧಿಸಬಹುದು. ಹೀಗಾಗಿ ವಿದ್ಯಾರ್ಥಿಗಳಲ್ಲಿ ಛಲ, ಆತ್ಮವಿಶ್ವಾಸ ಇರಬೇಕು ಎಂದರು.
ಪ್ರಾಚಾರ್ಯ ಅಶೋಕ ರಾಜನಕೋಳೂರು ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆ ವಿಶ್ವನಾಥ, ರಾಮಚಂದ್ರ, ಮಲ್ಲಮ್ಮ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ