ಗಡಿ ಜಿಲ್ಲೆ ಜನ ತತ್ತರ


Team Udayavani, Aug 6, 2019, 4:03 PM IST

yg-tdy-1

ಶಹಾಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಪ್ರಮುಖ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದ್ದು, ಅಲ್ಲಿಂದ ಜಿಲ್ಲೆಯ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿಬಿಡಲಾಗುತ್ತಿದೆ.

ಬಸವಸಾಗರ ಜಲಾಶಯ ತುಂಬಿ ಅಪಾಯ ಮಟ್ಟ ತಲುಪಿರುವ ಕಾರಣ ಅನಿವಾರ್ಯವಾಗಿ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿ ಬಿಡುತ್ತಿರುವ ಕಾರಣ ತಾಲೂಕಿನ ನದಿ ತೀರದ ಹಲವು ಗ್ರಾಮಗಳ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ನದಿ ಪಾತ್ರದ ಗ್ರಾಮಗಳ ಜಮೀನಿಗೆ ನೀರು ನುಗ್ಗಿದ್ದು, ಹೊಲ, ಗದ್ದೆಗಳು ಕೆರೆಯಂತಾಗಿವೆ. ಹೆಸರು, ಹತ್ತಿ, ತೊಗರಿ ಸೇರಿದಂತೆ ಭತ್ತದ ಬೆಳೆಗಳು ನೀರಿನಲ್ಲಿ ಮುಳುಗಿದ್ದು, ಅಪಾರ ಪ್ರಮಾಣದ ನಷ್ಟ ಅನುಭವಿಸುವಂತಾಗಿದೆ.

ಒಂದಡೆ ಹೊಲ, ಗದ್ದೆಗಳು ಮುಳುಗಿ ಬೆಳೆ ನಷ್ಟದ ಚಿಂತೆಯಾದರೆ, ಪ್ರವಾಹದಿಂದ ನದಿ ಪಾತ್ರದ ಗ್ರಾಮಗಳಲ್ಲಿ ಮೊಸಳೆ, ಕ್ರಿಮಿ ಕೀಟಗಳ ಆತಂಕ ಎದುರಾಗಿದೆ. ಈ ಮೊದಲು ಕೃಷ್ಣಾ ನದಿಯಲ್ಲಿ ಸಾಕಷ್ಟು ಮೊಸಳೆಗಳ ಕಾಟ ಎದುರಿಸಿದ್ದಾರೆ.

ಇದೀಗ ಪ್ರವಾಹ ಸಂದರ್ಭದಲ್ಲಿ ಮೊಸಳೆಗಳು ಎಲ್ಲಿ ಗ್ರಾಮಕ್ಕೆ ನುಗ್ಗಲಿವೆ ಎಂಬ ಭಯ ಇಲ್ಲಿನ ನದಿ ಪಾತ್ರದ ಜನರಲ್ಲಿದೆ. ಅಲ್ಲದೇ ಕ್ರಿಮಿ ಕೀಟಗಳ ಕಾಟ ಶುರುವಾಗಿದೆ. ತಾಲೂಕಿನ ಯಕ್ಷಿಂತಿ, ಹಯ್ನಾಳ (ಬಿ), ಟೊಣ್ಣೂರ, ಗೌಡೂರ, ಮರಕಲ್, ಬೆಂಡೆಬೆಂಬಳಿ, ಕೊಳ್ಳೂರ (ಎಂ), ಐಕೂರ, ತುಮಕೂರ, ಗೊಂದೆನೂರ, ಚೆನ್ನೂರ, ಕಂದಳ್ಳಿ, ಕೊಂಕಲ್ ಸೇರಿದಂತೆ ಹಲವಾರು ಗ್ರಾಮಗಳು ಕೃಷ್ಣಾ ಪ್ರವಾಹದಿಂದ ಆಯಾ ಗ್ರಾಮಗಳ ಸಮೀಪಕ್ಕೆ ನೀರು ಬಂದಿದ್ದು, ಗ್ರಾಮದಲ್ಲಿ ಮೊಸಳೆ, ಕ್ರಿಮಿ ಕೀಟಗಳ ಭಯ ಆವರಿಸಿದೆ.

ಅಲ್ಲದೆ ಕೃಷ್ಣಾ ಪ್ರವಾಹದಿಂದ ಅಂದಾಜು 2 ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶದ ಜಮೀನು ಮುಳುಗಡೆಯಾಗಿದ್ದು, ಅಪಾರ ಪ್ರಮಾಣದಲ್ಲಿ ರೈತಾಪಿ ಜನರ ಬೆಳೆ ಹಾನಿಯಾಗಿದೆ ಎನ್ನಲಾಗಿದೆ. ಈ ಕುರಿತು ಸಮರ್ಪಕ ವರದಿಯನ್ನು ಕಂದಾಯ ಇಲಾಖೆ ಜಿಲ್ಲಾಡಳಿತಕ್ಕೆ ನೀಡಬೇಕಿದೆ.

ಯಾವ ಸಮಯದಲ್ಲಿ ಅಧಿಕಾರಿಗಳು ಗ್ರಾಮಗಳನ್ನು ಖಾಲಿ ಮಾಡಲು ಸೂಚಿಸುತಾರೋ ಎಂಬ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಯಾವುದೇ ಕೃಷಿ ಚಟುವಟಿಕೆ ಇಲ್ಲದೆ ಪ್ರವಾಹದ ಕರಿ ನೆರಳಿನಲ್ಲಿಯೇ ದಿನ ದೂಡುತ್ತಿದ್ದೇವೆ ಎನ್ನುತ್ತಾರೆ ಟೊಣ್ಣೂರ ಮತ್ತು ಗೌಡೂರ ಗ್ರಾಮಸ್ಥರು.

ಗ್ರಾಮದ ಹತ್ತಿರ ನೀರು ಬಂದಿದ್ದು, ಕ್ರಿಮಿ ಕೀಟಗಳ ಆತಂಕ ಎದುರಾಗಿದೆ. ನದಿಯಲ್ಲಿ ಮೊಸಳೆಗಳನ್ನು ಕಂಡಿರುವ ಜನಕ್ಕೆ, ಮನೆಗಳ ಸಮೀಪಕ್ಕೆ ನೀರು ಹರಿದು ಬಂದಿದ್ದು, ಮೊಸಳೆಗಳು ಬರಬಹುದು ಎಂಬ ಭೀತಿಯೂ ಜನರನ್ನು ಕಾಡುತ್ತಿದೆ. ಪ್ರವಾಹದಿಂದ ಹೊಲ, ಗದ್ದೆಗಳಿಗೆ ನೀರು ನುಗ್ಗಿ ಬೆಳೆ ಹಾನಿ ಒಂದಡೆಯಾದರೆ, ಕ್ರಿಮಿ ಕೀಟಗಳ ಭಯದಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.•ಮಲ್ಲಿಕಾರ್ಜುನ ಬಾಗಲಿ, ಮಾಜಿ ಗ್ರಾಪಂ ಅಧ್ಯಕ್ಷ ಯಕ್ಷಿಂತಿ

ಪ್ರವಾಹದಿಂದಾಗಿ ಕೊಳ್ಳೂರ (ಎಂ) ಸೇತುವೆ ಮುಳುಗಡೆಯಾಗಿದೆ. ರಸ್ತೆ ಸಂಚಾರ ನಿಷೇಧಿಸಲಾಗಿದೆ. ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಹದಿಂದ ಮುಂಜಾಗ್ರತವಾಗಿ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಗ್ರಾಮದಲ್ಲಿ ಅಂತಹ ಸ್ಥಿತಿ ಉಂಟಾದಲ್ಲಿ, ಗಂಜಿ ಕೇಂದ್ರ ತೆರೆಯುವುದು ಸೇರಿದಂತೆ ಬೋಟ್ ವ್ಯವಸ್ಥೆ ಇತರೆ ಪ್ರವಾಹ ಎದುರಿಸುವ ವ್ಯವಸ್ಥೆಯಲ್ಲಿ ತಾಲೂಕು ಆಡಳಿತ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಸಿದ್ಧತೆಯಲ್ಲಿದ್ದೇವೆ.•ಸಂಗಮೇಶ ಜಿಡಗೆ, ತಹಶೀಲ್ದಾರ್‌ ಶಹಾಪುರ

 

•ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.