ಟ್ರಾಫಿಕ್‌ ಸಮಸ್ಯೆಗೆ ಬೇಸತ್ತ ಜನತೆ

•ಸಂಚಾರಕ್ಕೆ ಅಡಚಣೆ•ನಿತ್ಯವೂ ಸಾರ್ವಜನಿಕರ ಪರದಾಟ

Team Udayavani, May 27, 2019, 11:27 AM IST

yg-tdy-2..

ಸುರಪುರ: ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಸಾಲುಗಟ್ಟಿ ನಿಂತ ವಾಹನಗಳು.

ಸುರಪುರ: ದಿನ ಕಳೆದಂತೆ ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ತೀವ್ರ ಕಾಣುತ್ತಿದೆ. ಬೆಳಗ್ಗೆ 11:00 ಗಂಟೆಯಾಗುತ್ತಿದ್ದಂತೆ ನಗರದ ಪ್ರಮುಖ ಬೀದಿಗಳು ಸಂಚಾರದಿಂದ ತುಂಬಿ ಹೋಗಿರುತ್ತವೆ. ಶಾಲಾ ಮಕ್ಕಳು, ವಯೋವೃದ್ಧರು, ಮಹಿಳೆಯರು ರಸ್ತೆಯಲ್ಲಿ ಸಂಚರಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನಗರದ ಪ್ರಮುಖ ವೃತ್ತವಾದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ನಿತ್ಯವೂ ಟ್ರಾಫಿಕ್‌ ಕಿರಿಕಿರಿ ಆಗುತ್ತಿದ್ದು, ಸುಗಮ ಸಂಚಾರಕ್ಕೆ ಸಂಚಕಾರ ತಂದಿದೆ. ಬಸ್‌ ನಿಲ್ದಾಣಕ್ಕೂ ಇದೇ ಮಾರ್ಗದಿಂದ ಹೋಗಬೇಕು. ಬೀದರ್‌-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಬಸ್‌ಗಳ ಓಡಾಟವಿದೆ. ಬಸ್‌, ಲಾರಿ, ಬೈಕ್‌ ಸೇರಿದಂತೆ ಸಾವಿರಾರು ವಾಹನ ತಿರುಗಾಡುತ್ತವೆ. ಹೀಗಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತದೆ ಎಂಬುದು ನಾಗರಿಕರ ದೂರು.

ವಾಹನಗಳನ್ನು ನಿಲ್ಲಿಸಲು ನಗರದಲ್ಲಿ ಎಲ್ಲಿಯೂ ಸ್ಥಳವಿಲ್ಲ. ಹೀಗಾಗಿ ಪ್ರತಿ ಅಂಗಡಿಗಳ ಮುಂದೆ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ. ಇನ್ನೂ ವೃತ್ತದ ಹತ್ತಿರದ ಅಂಗಡಿಗಳ ಮುಂದೆ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಾರೆ. ಲಾರಿಯಂತಹ ದೊಡ್ಡ ವಾಹನಗಳು ನಡು ರಸ್ತೆಯಲ್ಲಿಯೇ ನಿಲ್ಲಿಸಿ ಕಿರಾಣಿ ಮತ್ತು ಇತರೆ ಸಾಮಗ್ರಿಗಳನ್ನು ಇಳಿಸುತ್ತಾರೆ. ಇದು ಟ್ರಾಫಿಕ್‌ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.

ಸುರಪುರ ಹೆಚ್ಚು ಹಳ್ಳಿಗಳನ್ನು ಹೊಂದಿರುವ ದೊಡ್ಡ ತಾಲೂಕು ಕೇಂದ್ರವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳ ನಿಮಿತ್ತ ನಗರಕ್ಕೆ ಬರುತ್ತಾರೆ. ಈ ಟ್ರಾಫಿಕ್‌ ಸಮಸ್ಯೆಯಿಂದ ನಡು ರಸ್ತೆಯಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇತ್ತ ಪೊಲೀಸರು ದಿನನಿತ್ಯವೂ ಈ ಸಮಸ್ಯೆ ಹೋಗಲಾಡಿಸಲು ಹರ ಸಾಹಸ ಪಡುತ್ತಿದ್ದಾರೆ.

ಗಾಂಧೀಜಿ ವೃತ್ತದಲ್ಲಿ ಸುಗಮ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಬಸ್‌ ನಿಲ್ದಾಣದ ಮಾರ್ಗದಲ್ಲಿ ರಸ್ತೆ ಬದಿಯ ಹಣ್ಣು, ತರಕಾರಿ ವ್ಯಾಪಾರದ ಬಂಡಿಗಳನ್ನು ಹಿಂದಕ್ಕೆ ಸರಿಸಬೇಕು. ರಸ್ತೆ ಮೇಲೆ ಅಡ್ಡಾದಿಡ್ಡಿಯಾಗಿ ಬೈಕ್‌, ಕಾರು ಸೇರಿದಂತೆ ಇನ್ನಿತರ ವಾಹನಗಳು ನಿಲ್ಲದಂತೆ ಕ್ರಮ ಜರುಗಿಸಬೇಕು. ಬೆಳಗಿನ 8:00 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ಬಾರಿ ವಾಹನಗಳ ನಗರ ಸಂಚಾರ ನಿಷೇಧಿಸಬೇಕು. ಈ ವಿಷಯದಲ್ಲಿ ಪೊಲೀಸ್‌ ಇಲಾಖೆ ಹೆಚ್ಚಿನ ಕಾಳಜಿ ವಹಿಸಿ ಟ್ರಾಫಿಕ್‌ ಸಮಸ್ಯೆ ಹೋಗಲಾಡಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.