ತಹಶೀಲ್ದಾರ್ ಮೇಲಿನ ಹಲ್ಲೆ ಖಂಡಿಸಿ ಮೆರವಣಿಗೆ
Team Udayavani, Feb 1, 2022, 2:57 PM IST
ಗುರುಮಠಕಲ್: ಬೀದರ ಜಿಲ್ಲೆಯ ಹುಮನಬಾದ್ ತಾಲೂಕಿನಲ್ಲಿ ತಹಶೀಲ್ದಾರ್ ಮೇಲೆ ನಡೆದ ಹಲ್ಲೆ ಖಂಡಿಸಿ, ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಮತ್ತು ಸರಕಾರಿ ನೌಕರರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಮೌನ ರ್ಯಾಲಿ ನಡೆಸಿ, ತಹಶೀಲ್ದಾರ್ ಶರಣಬಸವ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ. ಇಂತಹ ಹಲ್ಲೆಗಳಿಂದ ಸರ್ಕಾರಿ ನೌಕರರಿಗೆ ಅಭದ್ರತೆ ಕಾಡುತ್ತಿದೆ. ಸರಕಾರಿ ನೌಕರರು ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸುವಂತೆ ಆಗಿದೆ. ಸರಕಾರಿ ನೌಕರರಿಗೆ ಭದ್ರತೆ ಕಲ್ಪಿಸಬೇಕಾಗಿದೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಿ ಸರಕಾರಿ ನೌಕರರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಕ್ರಮ ತೆಗೆದುಕೊಳ್ಳಬೇಕು ಎಂದರು.
ವಿಶೇಷವಾಗಿ, ಕಂದಾಯ ಇಲಾಖೆ, ಗ್ರಾಪಂ, ಆರೋಗ್ಯ ಇಲಾಖೆ, ಭೂ ಇಲಾಖೆಯಲ್ಲಿರುವ ಸರಕಾರಿ ನೌಕರರು ಪ್ರತಿಸಲ ಹಲ್ಲೆಗೊಳಗಾಗುತ್ತಿರುತ್ತಾರೆ. ಕಠಿಣ ಕಾನೂನು ಜಾರಿಗೆ ತರಬೇಕೆಂದು ಅವರು ಮನವಿ ಮಾಡಿದರು.
ಸಂಘದ ಕಾರ್ಯದರ್ಶಿ ಕಿಷ್ಟರೆಡ್ಡಿ ಪಾಟೀಲ್ ದಂತಾಪುರ, ಉಪಾಧ್ಯಕ್ಷ ಭೀಮರಾಯ ಮತ್ತು ಅಂಜನೇಯ, ಕ್ರೀಡಾ ಕಾರ್ಯದರ್ಶಿಗಾಳದ ಸಾಯಬಣ್ಣ ಗಾಳ, ನಾಗೇಶ, ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ದೊಡ್ಡ ಬಸವರಾಜ, ತಾಲೂಕು ಆರೋಗ್ಯ ಇಲಾಖೆ ಸಂಘದ ಅಧ್ಯಕ್ಷ ಹರಿಬಾಬು, ಗ್ರೇಡ್-2 ಉಪತಹಶೀಲ್ದಾರ್ ನರಸಿಂಹ ಸ್ವಾಮಿ, ಶಿಕ್ಷಕರ ಸಂಘದ ಖಚಾಂಚಿ ಗಾಯತ್ರಿ ನಾಯಕಿನ್, ಶಿಕ್ಷಕರಾದ ಬಾಲರಾಜ, ಮೋನಪ್ಪ ಬಡಿಗೇರ, ವೆಂಕಟರಾಮುಲು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್