ಉದಯವಾಣಿ ವರದಿ ಫಲಶೃತಿ: ಹತ್ತಿ ಖರೀದಿದಾರರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ
Team Udayavani, Nov 9, 2020, 9:00 PM IST
ಯಾದಗಿರಿ: ಜಿಲ್ಲೆಯ ಹತ್ತಿ ಕೇಂದ್ರಗಳಲ್ಲಿನ ರೈತರಿಗೆ ದರದಲ್ಲಿ ಮೋಸ, ಸೂಟ್ ನೆಪದಲ್ಲಿ ರೈತರ ಕೆಲ ಕೆಜಿ ಹತ್ತಿಯನ್ನು ಕಸಿಯುತ್ತಿದ್ದ ದಲ್ಲಾಳಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲೆಯ ವಿವಿಧ ಕಡೆಗಳಲ್ಲಿ ರಸ್ತೆಯುದ್ದಕ್ಕೂ ತೆರೆದಿರುವ ಹತ್ತಿ ಕೇಂದ್ರಗಳು ರೈತರಿಂದ ಹತ್ತಿ ಖರೀದಿಸುತ್ತಿದ್ದು, ಮೊದಲೇ ಪ್ರವಾಹ, ಅತಿವೃಷ್ಟಿಯಿಂದ ತೊಂದರೆಗೀಡಾಗಿದ್ದ ರೈತರ ಗಾಯದ ಮೇಲೆ ಬರೆ ಎಳೆಯುತ್ತಿರುವ ಕುರಿತು ಉದಯವಾಣಿ ನ.8ರಂದು ವರದಿಯನ್ನು ಪ್ರಕಟಿಸಿತ್ತು.
ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸೋಮವಾರ ನಗರದ ಹೊರವಲಯದ ಮುಂಡರಗಿ ರಸ್ತೆಯ ಮೌಲಾಲಿ ಅನ್ಪುರ್ ರೈಸ್ ಮಿಲ್ ಬಳಿಯಿರುವ ಹಾಗೂ ಇಂಪಿರಿಯಲ್ ಗಾರ್ಡನ್, ಯಾದಗಿರಿ ಬಸ್ ಕಾರ್ಯಾಗಾರ ಎದುರುಗಡೆ ತೆರೆದಿರುವ ಹತ್ತಿ ಖರೀದಿ ಕೇಂದ್ರಗಳಿಗೆ ಖುದ್ದಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹತ್ತಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೂಕ ಮತ್ತು ಅಳತೆಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಆಧಾರದಲ್ಲಿ ಅವರು ಅನಿರೀಕ್ಷಿತವಾಗಿ ನಗರದ ವಿವಿಧ ಹತ್ತಿ ಖರೀದಿ ಕೇಂದ್ರಗಳಿಗೆ ತೆರಳಿ ಅಲ್ಲಿನ ವಸ್ತುಸ್ಥಿತಿಯನ್ನು ಅವಲೋಕಿಸಿದರು.
ಹತ್ತಿ ಖರೀದಿ ಕೇಂದ್ರಗಳಿಂದ ರೈತರಿಗೆ ನೀಡಲಾದ ಬಿಲ್ಗಳನ್ನು ಪರಿಶೀಲಿಸಿದರು. ಈ ವೇಳೆ ಅನಧಿಕೃತ ಕಡಿತಗಳ ಮೂಲಕ ರೈತರಿಂದ ಹಣ ವಸೂಲಿ ಮಾಡುತ್ತಿರುವ ಖರೀದಿದಾರರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ನಿರೀಕ್ಷಕರು ನಾಲ್ವರು ಖರೀದಿದಾರರ ವಿರುದ್ಧ ಪ್ರಕರಣ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.
ಕಾಯ್ದೆ ತಿದ್ದುಪಡಿಯಿಂದ ಹಲ್ಲಿಲ್ಲದ ಹಾವಿನಂತಾದ ಅಧಿಕಾರಿಗಳು: ಸರ್ಕಾರ ಕೃಷಿ ಮಾರಾಟ ಕಾಯ್ದೆಯನ್ನು ತಿದ್ದುಪಡಿ ಮಾಡಿರುವುದು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳ ಪಾಡು ಹಲ್ಲಿಲ್ಲದ ಹಾವಿನಂತಾಗಿದೆ. ಅನಧಿಕೃತ ಖರೀದಿದಾರರ ಮೇಲೆ ಕ್ರಮಕೈಗೊಳ್ಳುವ ಯಾವುದೇ ಅಧಿಕಾರ ಕೃಷಿ ಮಾರುಕಟ್ಟೆ ಅಧಿಕಾರಿಗಳಿಗಿಲ್ಲ ಎನ್ನಲಾಗುತ್ತಿದೆ. ಕಳೆದ ಬಾರಿ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು 23 ಲಕ್ಷಕ್ಕೂ ಅಧಿಕ ದಂಡ ವಿಧಿಸಿ 196 ಪ್ರಕರಣಗಳನ್ನು ದಾಖಲಿಸಿದ್ದರು. ಆದರೇ ಇತ್ತೀಚೆಗಷ್ಟೇ ಕಾಯ್ದೆ ತಿದ್ದುಪಡಿಯಂತೆ ಯಾರಿಗಾದರೂ ರೈತರು ತಮ್ಮ ಉತ್ಪನ್ನಗಳನ್ನು ಮಾರಬಹುದಾಗಿದ್ದು, ಕಾಯ್ದೆಯಲ್ಲಿ ಹಲವು ಸಡಿಲಿಕೆ ಇರುವುದರಿಂದ ಅಧಿಕೃತ ಪರವಾನಿಗೆ ಪಡೆಯದಿದ್ದರೂ ರೈತರಿಂದ ಖರೀದಿಸಲು ಅವಕಶಾವಿದೆ ಎಂದು ಕೃಷಿ ಮಾರಾಟ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ರೈತರು ಮತ್ತಷ್ಟು ಅನ್ಯಾಯಕ್ಕೊಳಗಾಗುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ