ಶಾಸಕ ರೇಣುಕಾಚಾರ್ಯ ವಿರುದ್ದ ಪ್ರತಿಭಟನೆ
Team Udayavani, Mar 30, 2022, 1:16 PM IST
ಸುರಪುರ: ಬೇಡ ಜಂಗಮರ ಹೆಸರಿನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಅವರ ಮಕ್ಕಳು ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂದು ಆರೋಪಿಸಿ ಗಾಂಧಿ ವೃತ್ತದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಸಚಿವರಾಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ, ಶಾಸಕರಾಗಿ ರೇಣುಕಾಚಾರ್ಯ ಅವರು ಸರ್ಕಾರಕ್ಕೆ ಮೋಸ ಮಾಡಿ ತನ್ನ ಸಹೋದರ, ಸಹೋದರಿ ತನ್ನ ಇಬ್ಬರು ಮಕ್ಕಳು ಮತ್ತು ತಾವೂ ಬೇಡ ಜಂಗಮ ಪರಿಶಿಷ್ಟ ಪ್ರಮಾಣ ಪತ್ರ ಪಡೆದಿರುವುದು ಖಂಡನೀಯ ಎಂದರು.
ಪ್ರಮಾಣ ಪತ್ರ ಪಡೆದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಖೊಟ್ಟಿ ಜಾತಿ ಪ್ರಮಾಣ ಪತ್ರ ನೀಡಿರುವ ತಹಶೀಲ್ದಾರ್ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರಿಗೆ ಬರೆದ ಮನವಿಯನ್ನು ಶಿರಸ್ತೇದಾರ ಸೋಮನಾಥ ದೊರೆ ಅವರಿಗೆ ಸಲ್ಲಿಸಿದರು. ಮಾನಪ್ಪ ಬಿಜಾಸಪುರ, ಹನುಮಂತ ಬಾಂಬೆ, ಬುದ್ಧಿವಂತ ನಾಗರಾಳ, ಜಟ್ಟೆಪ್ಪ ನಾಗರಾಳ, ರಾಮಣ್ಣ ಶೆಳ್ಳಗಿ, ಮೂರ್ತಿ ಬೊಮ್ಮನಳ್ಳಿ, ಬಸವರಾಜ ದೊಡ್ಡಮನಿ, ಖಾಜಾ ಹುಸೇನ್ ಗುಡಗುಂಟಿ, ಹುಲಗಪ್ಪ ಜಾಂಗೀರ, ದ್ಯಾವಪ್ಪ ಚಲುವಾದಿ, ಮರಿಲಿಂಗಪ್ಪ ದೇವಿಕೇರಿ, ಮಹೇಶ ಯಾದಗಿರಿ, ಹನೀಫ್ ಗುಡಗುಂಟಿ, ಭೀಮಣ್ಣ ಮಾಲಗತ್ತಿ, ಬನ್ನಪ್ಪ ಕೋನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ