ಎನ್ಇಪಿ ಜಾರಿ ವಿರೋಧಿಸಿ ಪ್ರತಿಭಟನೆ
Team Udayavani, Dec 15, 2021, 1:10 PM IST
ಯಾದಗಿರಿ: ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿಯೂ ಉಪನ್ಯಾಸಕರ, ಮೂಲಭೂತ ಸೌಲಭ್ಯಗಳ ಕೊರತೆ ಕಣ್ಣಿಗೆ ರಾಚುವಂತಿದೆ. ಇಂತಹ ಸಮಸ್ಯೆ ಪರಿಹರಿಸದೇ ಏಕಾಏಕಿ ಹೊಸ ಶಿಕ್ಷಣ ನೀತಿ ಜಾರಿ ವಿರೋಧಿಸಿ ಎಐಡಿಎಸ್ಒ ಸಂಘಟನೆಯಿಂದ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ಅಕ್ಕಮಹಾದೇವಿ ವಿ.ವಿ. ವಿಜಯಪೂರ ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ದಿಢೀರ್ ಎನ್ಇಪಿ 2020 ಜಾರಿ ಮಾಡಿದೆ. ಗುವಿವಿ ಈಗಾಗಲೇ ಸುಮಾರು ಶೇ.90 ಕಾಯಂ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿ ಇವೆ. ಇದರಿಂದ ಕನಿಷ್ಟ ಗುಣಮಟ್ಟದ ಶಿಕ್ಷಣ ಮತ್ತು ಸಮರ್ಪಕ ಪರೀಕ್ಷೆ, ಮೌಲ್ಯಮಾಪನ, ಅಂಕಪಟ್ಟಿಗಳು ವಿದ್ಯಾರ್ಥಿಗಳಿಗೆ ದೊರಕದೇ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಈ ಸಂದರ್ಭದಲ್ಲಿ ರಾಜ್ಯ ನಾಯಕರಾದ ವೆಂಕಟೇಶ ದೇವದುರ್ಗಾ, ಜಿಲ್ಲಾ ಸಮಿತಿ ಸದಸ್ಯರಾದ ಮಹ್ಮದ್ ಅಶ್ರಫ್, ರಾಜೇಶ್ವರಿ ಮನಗನಾಳ, ಮೌನೇಶ, ಭಾಗ್ಯಜೋತಿ, ವಿದ್ಯಾರ್ಥಿಗಳಾದ ಅಶ್ವಿನಿ, ಆಶಪ್ಪಾ, ಮೌನೇಶ್ ಸೇರಿದಂತೆ ನೂರಾರು ಪದವಿ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ