ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Aug 7, 2022, 5:04 PM IST
ಯಾದಗಿರಿ: ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೊಳಿಸಲು ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಮುಖಂಡರು ನಗರದ ಸುಭಾಷ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.
ಮಾದಿಗ ದಂಡೋರಾ ರಾಜ್ಯಾಧ್ಯಕ್ಷ ಬಿ. ನರಸಪ್ಪ, ನ್ಯಾ| ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶೀಘ್ರ ವರದಿ ಯಥಾವತ್ತಾಗಿ ಜಾರಿಗೊಳಿಸದಿದ್ದರೆ ನಮ್ಮ ಕಾಲೋನಿಗಳಲ್ಲಿ ನಿಮ್ಮನ್ನು ಬಿಟ್ಟುಕೊಳ್ಳುವುದಿಲ್ಲ. ಜೊತೆಗೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುತ್ತೇವೆ ಎಂದು ಎಚ್ಚರಿಸಿದರು.
ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ, ಜಿಲ್ಲಾಧ್ಯಕ್ಷ ಕಾಶಪ್ಪ ಹೆಗ್ಗಣಗೇರಾ, ಸಮಾಜದ ಹಿರಿಯ ಮುಖಂಡ ಮಲ್ಲಣ್ಣ ದಾಸನಕೇರಿ ಮಾತನಾಡಿದರು.
ಸಮಾಜದ ಮುಖಂಡರಾದ ಶಿವಲಿಂಗಪ್ಪ ಪುಟಗಿ, ಗೋಪಾಲ ದಾಸನಕೇರಿ, ಹಣಮಂತ ಲಿಂಗೇರಿ, ಭೀಮಾಶಂಕರ ಬಿಲ್ಲವ, ಮಲ್ಲಿಕಾರ್ಜುನ ಬಬಲಾದ, ಚಂದ್ರಶೇಖರ ಮುಂಡರಿಗಿ, ದೇವಿಂದ್ರಪ್ಪ ಲಿಂಗೇರಿ, ಮಲ್ಲು ಬೇಳಗೇರಾ, ಸಾಮುವೇಲ್ ಕಣೆಕಲ್, ಭೀಮರಾಯ ಕಂದಕೂರ, ರಾಜು ಹೊಸಳ್ಳಿ, ಮಲ್ಲಿಕಾರ್ಜುನ ಸುಕ್ಕಪನೋರ, ಅನಿಲ ಕುಮಾರ ದಾಸನಕೇರಿ, ಸೋಮಶೇಖರ, ಭೀಮಣ್ಣ ಕಕ್ಕೇರಾ, ಹಣಮಂತ ಗೊಂದೆನೂರ, ನಿಂಗಪ್ಪ ಹಾಲಗೇರಾ, ಮಲ್ಲಪ್ಪ ಹೆಗ್ಗಣಗೇರಾ, ಮರೆಪ್ಪ ವಡಿಗೇರಾ, ಈರಣ್ಣ ವಡಿಗೇರಾ, ಯೇಸು ಕಿಲ್ಲಣಕೇರಾ, ಹುಲಗಪ್ಪ ಗೊಂದೆನೂರ, ವಿಲ್ಸನ್ ಹಾಲಗೇರಾ, ನಾಗಪ್ಪ ನೀಲಹಳ್ಳಿ, ಶರಣಪ್ಪ ವಡಿಗೇರಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ