ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Feb 4, 2020, 1:20 PM IST
ಹುಣಸಗಿ: ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಮಂಜಲಾಪುರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು, ಎಸ್ಡಿಎಂಸಿ ಪದಾಧಿಕಾರಿಗಳು ವಜ್ಜಲ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಎಂಸಿ ಅಧ್ಯಕ್ಷ ಬಸವರಾಜ ಹಳ್ಳಿ, ಕಳೆದ ಒಂದು ತಿಂಗಳಿನಿಂದ ಮಂಜಲಾಪುರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಪಿಡಿಒ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರಕಾರ ನೀರಿನಂತೆ ಹಣ ಖರ್ಚು ಮಾಡಿದರೂ ಅಧಿಕಾರಿಗಳ ನಿರ್ಲಕ್ಷ ದಿಂದ ಮಕ್ಕಳು ಬಿಸಿಯೂಟದ ನಂತರ ಕುಡಿಯವ ನೀರಿಗಾಗಿ ಮನೆಗೆ ಬರುವಂತಾಗಿದೆ. ಗ್ರಾಮದಲ್ಲಿರುವ ಬಾವಿಯಿಂದ ದ್ವಿಚಕ್ರದ ಮೇಲೆ ನೀರು ತಂದು ಅಡುಗೆ ಮಾಡಿ ಮಕ್ಕಳಿಗೆ ಬಡಿಸುವ ಪರಿಸ್ಥಿತಿ ಬಂದಿದೆ. ಶಾಲೆ ಆವರಣದಲ್ಲಿ ಕುಡಿಯುವ ನೀರಿನ ಕೊಳವೆಬಾವಿ ಇದೆ. ಆದರೆ ಅದು ಕೆಟ್ಟು ಸುಮಾರು ಒಂದು ತಿಂಗಳು ಗತಿಸಿದೆ. ಪಿಡಿಒ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಕುಡಿಯುವ ನೀರಿಗಾಗಿ ಶಾಲೆ ಬಿಟ್ಟು ಮನೆಯಲ್ಲಿರುವಂತಾಗಿದೆ. ಪಿಡಿಒ ಇದುವರೆಗೂ ಸಮಸ್ಯೆ ಕುರಿತು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲ ಪಾಲಕರು ಹಾಗೂ ಗ್ರಾಪಂ ಸದಸ್ಯರು ವಿದ್ಯಾರ್ಥಿಗಳೊಂದಿಗೆ ಗ್ರಾಪಂ ಎದುರು ಪ್ರತಿಭಟನೆ ಹಮ್ಮಿಕೊಂಡು ಅಧಿಕಾರಿಯನ್ನು ಎಚ್ಚರಿಸಬೇಕಾದ ಪರಿಸ್ಥಿತಿ ಬಂದಿದೆ. ಸಂಬಂಧಿಸಿದ ಅಧಿಕಾರಿಗಳು ಶಾಲೆ ಮಕ್ಕಳಿಗೆ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾನಯ್ಯ ಬಿರಾದಾರ, ಪರಮಣ್ಣ ಕಂಬಳಿ, ಚಂದಪ್ಪ ಬೈಚಬಾಳ, ಪರಮಣ್ಣ ನೀಲೊಗಲ್ಲ, ಮಲ್ಲಪ್ಪ ಮೇಟಿ, ಮಾನಪ್ಪ ಹಾದಿಮನಿ ಸೇರಿದಂತೆ ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ