ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ
Team Udayavani, May 26, 2018, 5:46 PM IST
ಸುರಪುರ: ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿಯಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಎಚ್.ಡಿ. ಕುಮಾರ ಸೇನೆ ಕಾರ್ಯಕರ್ತರು ನಗರದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿದರು.
ಸೇನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಭೀಮರಾಯ ನ ಗುಡಿಕೆಬಿಜೆಎನ್ನೆಲ್ ಇಲಾಖೆಗೆ 2014ರಿಂದ 2018ರ ವರೆಗೆ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕಾಗಿ ಸಾವಿರಾರು ಕೋಟಿ ರೂ. ಅನುದಾನ ಬಂದಿದೆ. ಆದರೆ ಅನುದಾನ ಸಮರ್ಪಕವಾಗಿ ಸದ್ಬಳಕೆ ಆಗಿಲ್ಲ. ಅಧಿಕಾರಿಗಳು ಬಡವರಿಗೆ ಯೋಜನೆಗಳನ್ನು ತಲುಪಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.
2014-15ನೇ ಸಾಲಿಗೆ ಎಸ್ಸಿಪಿಯಲ್ಲಿ 4.59 ಕೋಟಿ ರೂ., ಟಿಎಸ್ಪಿಯಲ್ಲಿ 24.75 ಕೋಟಿ ರೂ., 2015-16ನೇ ಸಾಲಿನ ಟಿಎಸ್ ಪಿಯಲ್ಲಿ 2.35 ಕೋಟಿ ರೂ., 2016-17ನೇ ಸಾಲಿನ ಟಿಎಸ್ಪಿಯಲ್ಲಿ 3 ಕೋಟಿ ರೂ., 2017-18ನೇ ಸಾಲಿನ ಎಸ್ಸಿಪಿಯಲ್ಲಿ 700 ಕೋಟಿ ರೂ., ಟಿಎಸ್ಪಿಯಲ್ಲಿ 200 ಕೋಟಿ ರೂ., ಅನುದಾನ ಬಳಕೆ ಆಗಿಲ್ಲ. ಇದರಿಂದ ಪರಿಶಿಷ್ಟ ಜನಾಂಗಕ್ಕೆ ಸಮರ್ಪಕವಾಗಿ ಯೋಜನೆ ತಲುಪುತ್ತಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ದೂರಿದರು.
ಈ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಬೋರ್ವೆಲ್ ಮತ್ತು ಪೈಪ್ಲೈನ್ ಪೂರ್ಣಗೊಂಡಿಲ್ಲ. ಆದರೆ ಅಧಿಕಾರಿಗಳು ಕಾಮಗಾರಿ ಮುಗಿದಿವೆ ಎಂದು ಬಿಲ್ ತೆಗೆದಿದ್ದಾರೆ. ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವ ಬಗ್ಗೆ
ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೂಡಲೇ ಈ ಬಗ್ಗೆ ತನಿಖೆ ಮಾಡಿಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಅನುದಾನ ಬಳಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿ ಗಳ ಮೇಲೆ ಪರಿಶಿಷ್ಟ ದೌರ್ಜನ್ಯತಡೆ ಕಾಯ್ದೆ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ವಿಭಾಗೀಯ ಅಧಿಕಾರಿಗೆ ಬರೆದ ಬೇಡಿಕೆಗಳ ಮನವಿಯನ್ನು ಶಿರಸ್ತೇದಾರ ಶರಣುಕುಮಾರ ಅವರಿಗೆ ಸಲ್ಲಿಸಿದರು.
ಮುಖಂಡರಾದ ಮಾನಯ್ಯ ದೊರೆ, ತಿರುಪತಿ ನಾಯಕ, ನಾಗಪ್ಪ ಕನ್ನೆಳ್ಳಿ, ಅಂಬಣ್ಣ ದೊರೆ, ಹಣಮಂತ್ರಾಯ ಬಾದ್ಯಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ