ದಲಿತರಿಗೆ ಕಿರುಕುಳ; ಕ್ರಮಕ್ಕೆ ಆಗ್ರಹ
Team Udayavani, Nov 11, 2020, 7:36 PM IST
ಯಾದಗಿರಿ: ನಗರದ ಸ.ನಂ. 85,86/ಅ ಜಮೀನಿನ ಮಾಲೀಕ ತಿಪ್ಪಣ್ಣ ಗೋಸಿ ಅವರಿಂದ ಸುಮಾರು 25-30 ವರ್ಷಗಳ ಹಿಂದೆ ಖರೀದಿಸಿದ ಸ್ಥಳದಲ್ಲಿ 50ಕ್ಕೂ ಹೆಚ್ಚು ಕುಟುಂಬದವರುಮನೆ ನಿರ್ಮಿಸಿಕೊಂಡಿದ್ದು ಇದೀಗಅವರ ಮಗ ಮಲ್ಲಿಕಾರ್ಜುನ ಗೋಸಿದಲಿತರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಡಿಸಿಗೆ ಮನವಿ ಸಲ್ಲಿಸಿತು.
ನಗರದ ಮುಖ್ಯಬೀದಿಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಡಿಸಿ ಕಚೇರಿ ಎದುರು ಧರಣಿ ನಡೆಸಿ ದಲಿತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಲಾಯಿತು. ಸ್ಥಳ ಖರೀದಿಸಿರುವ ಫಲಾನುಭವಿಗಳು ಮನೆ ನಿರ್ಮಿಸಿಕೊಂಡಿದ್ದು, ಜಮೀನು ಮಾಲೀಕರ ಮರಣದ ನಂತರ ಅವರ ಮಗ ಜಮೀನು ಖರೀದಿಸಿದವರನ್ನು ಒಕ್ಕಲೆಬ್ಬಿಸಲು ಪ್ರಾರಂಭಿಸಿದ್ದು ವಕೀಲರ ಮೂಲಕ ಕಾನೂನು ತಿಳಿವಳಿಕೆ ಪತ್ರ ಕಳಿಸುತ್ತಿದ್ದಾರೆ ಎಂದು ನೊಂದವರು ಅಳಲು ತೋಡಿಕೊಂಡರು.
ಸ್ಥಳದ ತೆರಿಗೆ ಕಟ್ಟಿ, ಪರವಾನಗಿ ಪಡೆದು ಕಟ್ಟಡ ನಿರ್ಮಿಸಿಕೊಂಡರೂ ಕಾನೂನು ಬಾಹಿರ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು ಇಲ್ಲಿನ ನಿವಾಸಿಗಳು ಹಣ ನೀಡಿ ಜಮೀನು ಖರೀದಿಸಿದ್ದಾರೆ ಎಂದು ಹೇಳಿದರು. ಮನೆ ನಿರ್ಮಿಸಿಕೊಂಡ ಕುಟುಂಬಗಳಿಗೆ ರಕ್ಷಣೆ ನೀಡಿ, ದಲಿತರ ತೊಂದರೆ ನೀಡುತ್ತಿರುವ ವ್ಯಕ್ತಿ ವಿರುದ್ಧಪರಿಶಿಷ್ಟ ಜಾತಿ ದೌರ್ಜನ್ಯದಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟ ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು ನೀಡಿದೆ.
ಈ ವೇಳೆ ಗುರುಮಠಕಲ್ ಖಾಸಾಮಠದ ಶಾಂತವೀರ ಸ್ವಾಮೀಜಿ, ಮಲ್ಲಿಕಾರ್ಜುನ ಕ್ರಾಂತಿ, ಶಿವಪ್ಪ ಗಿರೆಪ್ಪನೋರ್, ಸೈದಪ್ಪ ಕೂಲೂರು, ತಾಯಪ್ಪ ಭಂಡಾರಿ, ಮರೆಪ್ಪ ಚಿಟ್ಟರಕರ್, ಮಲ್ಲಿನಾಥ ಸುಂಗಲಕರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ