ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ
Team Udayavani, Aug 18, 2017, 11:10 AM IST
ಕಕ್ಕೇರಾ: ಪಟ್ಟಣದಲ್ಲಿ ಸಮರ್ಪಕ ವಿದ್ಯುತ್ ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕೆಂದು ಸದಸ್ಯರಿಂದ ಪುರಸಭೆ ಮುಖ್ಯಾಧಿಕಾರಿ ಆದಪ್ಪ ಸುರಪುರಕರ್ ಅವರಿಗೆ ಗುರುವಾರ ಮನವಿ ಸಲ್ಲಿಸಿ ಆಗ್ರಹಿಸಿದರು. ಕಳೆದ ವಾರದಿಂದ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಇದರಿಂದ ನಾಗರಿಕರಿಗೆ ತೊಂದರೆ ಅನುಭವಿಸುವಂತ್ತಾಗಿದೆ. ಅಲ್ಲದೆ ಮಂಜೂರಾದ ವಸತಿ ಆಶ್ರಯ ಮನೆಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಲು ಮೀನಮೇಷ ಮಾಡಲಾಗುತ್ತಿದೆ ಎಂದು ಒತ್ತಾಯಿಸಿದರು. ವರ್ಷವಾದರೂ ಪುರಸಭೆ ಸಮಾನ್ಯ ಸಭೆ ಕೂಡ ಕರೆದಿಲ್ಲ. ಸ್ಥಾಯಿ ಸಮಿತಿ ರಚನೆ ಮಾಡುವಲ್ಲಿ ವಿಳಂಭವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಕೆಲವೊಂದು ದೊಡ್ಡಿಗಳಿಗೆ ವಿದ್ಯುತ್ ಇಲ್ಲದೆ ಕತ್ತಲ್ಲಲ್ಲೆ ಜೀವನ ನಡೆಸುತ್ತಿದ್ದಾರೆ. ಪ್ರಮುಖ ರಸ್ತೆಗೆ ಬೀದಿ ದೀಪಗಳ ಅಳವಡಿಕೆಗೆ ಲಕ್ಷಾಂತರ ಹಣ ಖರ್ಚು ಮಾಡಲಾಗಿದೆ. ಆದರೂ ಯಾವುದೇ ದೀಪಗಳೂ ಅಳವಡಿಕೆ ಆಗಿಲ್ಲ ಎಂದು ಕಿಡಿಕಾರಿದರು. ಶೀಘ್ರದಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದರೆ ಪುರಸಭೆಗೆ ಬೀಗ ಹಾಕಬೇಕಾಗುತ್ತದೆ ಎಂದು ಸದಸ್ಯರಾದ ರಣಕುಮಾರ ಸೊಲ್ಲಾಪುರ, ಬಸಯ್ಯಸ್ವಾಮಿ, ಆದಯ್ಯ ಗುರಿಕಾರ, ಗ್ವಾಲಪ್ಪ ಮಲ್ಕೋಜಿ, ಹೈಯಾಳಪ್ಪ ಅಬಲಿ, ಬಸಪ್ಪ ಹರಿಜನ, ನಂದಪ್ಪ ಗುಮೆದಾರ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ