ಸಮರ್ಪಕ ರಸಗೊಬ್ಬರ-ಬಿತ್ತನೆ ಬೀಜ ಪೂರೈಸಿ


Team Udayavani, Jun 21, 2022, 2:04 PM IST

14seeds

ಗುರುಮಠಕಲ್‌: ತಾಲೂಕಿನಲ್ಲಿ ಸಮರ್ಪಕ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆಗೆ ಸಮಸ್ಯೆಯಾದರೆ ರೈತರೊಂದಿಗೆ ಕೃಷಿ ಇಲಾಖೆ ಕಚೇರಿ ಎದುರು ಧರಣಿ ಕುಳಿತುಕೊಳ್ಳುವೆ ಎಂದು ಶಾಸಕ ನಾಗನಗೌಡ ಕಂದಕೂರ ಕೃಷಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತ್ತೈಮಾಸಿಕ ಕೆಪಿಡಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮುಂಗಾರು ಮಳೆಯಾಗಿಲ್ಲ. ಇಷ್ಟರಲ್ಲಿ ಮಳೆಯಾದರೆ ರೈತರಿಗೆ ಸಕಾಲಕ್ಕೆ ಬೀಜ ಮತ್ತು ರಸಗೊಬ್ಬರ ದೊರೆಯಬೇಕು ಎಂದು ತಾಕೀತು ಮಾಡಿದರು. ತಾವು ಶಾಸಕರಾದಾಗಿನಿಂದ ಅಂಗನವಾಡಿ ಮತ್ತು ಶಾಲಾ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾದರೂ ಇನ್ನು ಶಾಲೆಗಳಿಗೆ ಸಮರ್ಪಕ ಕಟ್ಟಡಗಳಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಕೊಠಡಿಗಳ ಅಗತ್ಯತೆಯ ಕುರಿತು ಮೇಲಧಿಕಾರಿಗಳು ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸುವುದಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

ಮಕ್ಕಳ ಶಿಕ್ಷಣಕ್ಕೆ ಸಮರ್ಪಕ ಸೌಕರ್ಯ ಒದಗಿಸಬೇಕು. ಈ ನಿಟ್ಟಿನಲ್ಲಿ ಶೀಘ್ರವೇ ಉಳಿದ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಿದರು.

ಗುರುಮಠಕಲ್‌ ಪಟ್ಟಣದ ಸಮುದಾಯ ಅಸ್ಪತ್ರೆಯಲ್ಲಿ ಆಂಬ್ಯುಲೆನ್ಸ್‌ ಇಲ್ಲದಿರುವುದು ಸಾಕಷ್ಟು ತೊಂದರೆಯಾಗಿದೆ. ಅಪಘಾತದಲ್ಲಿ ಆಂಬ್ಯುಲೆನ್ಸ್‌ ಸಕಾಲಕ್ಕೆ ಇಲ್ಲದೇ ವ್ಯಕ್ತಿ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಕೆಡಿಪಿ ಸದಸ್ಯ ವಿಜಯ ಮಗದಂಪುರ ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ಡಾ| ಹನುಮಂತರೆಡ್ಡಿ ರೋಗಿಯನ್ನು ಸಾಗಿಸುವ ವೇಳೆ ಆಂಬ್ಯುಲೆನ್ಸ್‌ ಕೆಟ್ಟಿದ್ದರಿಂದ ಸಮಸ್ಯೆಯಾಗಿದೆ ಸರಿಪಡಿಸಲಾಗುತ್ತಿದೆ ಎಂದರು. ಶಾಸಕ ಕಂದಕೂರ ಮಾತನಾಡಿ, ತಾಲೂಕು ಕೇಂದ್ರ ಸ್ಥಾನದಲ್ಲಿ ಆಂಬ್ಯುಲೆನ್ಸ್‌ ಕೆಟ್ಟರೆ ಹೇಗೆ? ತಕ್ಷಣ ಸರಿಪಡಿಸುವ ಜವಾಬ್ದಾರಿಯಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ತಾವು 2 ಆಂಬ್ಯುಲೆನ್ಸ್‌ ಒದಗಿಸುವುದಾಗಿ ಹೇಳಿದರು.

ಗುರುಮಠಕಲ್‌ ಆಸ್ಪತ್ರೆಯಲ್ಲಿ ಹಗಲಲ್ಲೇ ವೈದ್ಯರು ಇರಲ್ಲ ಎನ್ನುವ ಸಾಕಷ್ಟು ದೂರುಗಳು ಬರುತ್ತಿದ್ದು, ಅಧಿಕಾರಿಗಳು ಏನು ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಸಹಾಯಕ ಕೃಷಿ ನಿರ್ದೇಶಕಿ ಶ್ವೇತಾ ಮಾತನಾಡಿ, ಜೂನ್‌ ತಿಂಗಳಲ್ಲಿ ತಾಲೂಕಿನಲ್ಲಿ 63 ಎಂ.ಎಂ. ಮಳೆಯಾಗಬೇಕಿತ್ತು. ಕೇವಲ 8 ಎಂ.ಎಂ. ಮಳೆಯಾಗಿದ್ದು, ಶೇ. 87ರಷ್ಟು ಕೊರೆತ ಮಳೆಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

54 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿಯಿದ್ದು, 11 ಸಾವಿರ ಹೆಕ್ಟೇರ್‌ (ಶೇ.20) ಬಿತ್ತನೆಯಾಗಿದೆ ಎಂದು ವಿವರಿಸಿದರು. ಇದೇ ವೇಳೆ ರಸಗೊಬ್ಬರ ಕೊರೆತಯಾಗದಂತೆ ಕ್ರಮವಹಿಸಲು ಕೃಷಿ ಅಧಿಕಾರಿಗಳಿಗೆ ನಿರ್ದೇಶಿಸಿದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಈ ವೇಳೆ ತಹಶೀಲ್ದಾರ್‌ ಚನ್ನಬಸವ, ಯಾದಗಿರಿ ತಾಪಂ ಇಒ ಬಸವರಾಜ ಶರಭೈ, ಮುಖ್ಯಾಧಿಕಾರಿ ಲಕ್ಷ್ಮೀಬಾಯಿ, ತಾಲೂಕು ವೈದ್ಯಾಧಿಕಾರಿ ಹನುಮಂತರೆಡ್ಡಿ, ಸಿಡಿಪಿಒ ಭೀಮರಾಯ ಕಣ್ಣೂರ, ಬಿಒ ಚಂದ್ರಕಾಂತರೆಡ್ಡಿ, ಕೆಡಿಪಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.