ಅಟಲ್‌ ಜೀ ಆಪರೇಟರ್‌ಗಳಿಗೆ ಸೇವಾ ಭದ್ರತೆ ನೀಡಿ


Team Udayavani, Feb 7, 2022, 2:59 PM IST

19atal

ಗುರುಮಠಕಲ್‌: ಸುಮಾರು 14 ವರ್ಷಗಳಿಂದ ಅತ್ಯಂತ ಕಡಿಮೆ ಗೌರವಧನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಆದ ಕಾರಣ ರಾಜ್ಯ ಸರ್ಕಾರ ದಯವಿಟ್ಟು ಅಟಲ್‌ ಜೀ ಜನಸ್ನೇಹಿ ಕೇಂದ್ರಗಳನ್ನು ಮುಂದುವರಿಸಿ ನಮಗೆ ಸೇವಾ ಭದ್ರತೆ ನೀಡಬೇಕೆಂದು ಯಾದಗಿರಿ ಜಿಲ್ಲೆಯ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳ ಆಪರೇಟರ್‌ಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನಾಡ ಕಚೇರಿಯ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳ ಡೇಟಾ ಎಂಟ್ರಿ ಆಪರೇಟರ್‌ ಗಳಿಗೆ ರಾಜ್ಯ ಸರ್ಕಾರ ಯಾವುದೇ ಸೇವಾ ಭದ್ರತೆ ನೀಡುತ್ತಿಲ್ಲ. 1222 ಡೇಟಾ ಎಂಟ್ರಿ ಆಪರೇಟರ್‌ಗಳ ಕುಟುಂಬಗಳು ಇದನ್ನೇ ಅವಲಂಬಿಸಿವೆ. ಹಲವಾರು ವರ್ಷಗಳಿಂದ ಕಂದಾಯ ಇಲಾಖೆಯ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಡೇಟಾ ಎಂಟ್ರಿ ಆಪರೇಟರ್‌ ಗಳಾಗಿ ದುಡಿಯುತ್ತಿದ್ದೇವೆ. ಅದರ ಫಲವಾಗಿ ರಾಜ್ಯದ ಪರವಾಗಿ ಆಯುಕ್ತರು ರಾಷ್ಟ್ರಮಟ್ಟದ ಪ್ರಶಸ್ತಿ ಸೀಕರಿಸಿದ್ದಾರೆ ಎಂದು ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಆಪೇಟರ್‌ಗಳು ಹೆಮ್ಮೆಯಿಂದ ಹೇಳಿದರು.

ಅಟಲ್‌ಜೀ ಜನಸ್ನೇಹಿ ಕೇಂದ್ರ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾವು ಸರ್ಕಾರದ ವಿವಿಧ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಸೇವೆ ನೀಡಿರುವುದರಲ್ಲಿ ಸಾರ್ವಜನಿಕರ ಪ್ರಶಂಸೆ, ಪಾರದರ್ಶಕತೆಗೆ ಹೆಸರುವಾಸಿಯಾಗಿದ್ದು, ಇದರ ಜೊತೆಗೆ ಕೋವಿಡ್‌-19 ಮಹಾಮಾರಿಯಂತಹ ತುರ್ತು ಸಂದರ್ಭದಲ್ಲಿ ಫ್ರೆಂಟ್‌ ಲೈನ್‌ ವಾರಿಯರ್ಸ್‌ ಆಗಿ ಟೋಲ್‌ ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಕಂಟ್ರೋಲ್‌ ರೂಮ್‌, ಸ್ಥಳೀಯ ಮಟ್ಟದ ಚುನಾವಣೆಯಿಂದ ಲೋಕಸಭಾ ಚುನಾವಣೆಯ ಕರ್ತವ್ಯಗಳನ್ನು ಹಗಲು-ರಾತ್ರಿ ನಿರ್ವಹಿಸುವುದರ ಜೊತೆಗೆ ಬೆಳೆ ಸಮೀಕ್ಷೆ ಮಾಡಿದ್ದೇವೆ.

ನಮ್ಮ ಈ ಸಾಮರ್ಥ್ಯ, ಸೇವೆಯನ್ನು ಮೆಚ್ಚಿ ಆಯೋಗ ಇನ್ನು ಹೆಚ್ಚಿನದಾಗಿ ವಿವಿಧ 800 ಸೇವೆಗಳನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರದಿಂದಲೇ ನೀಡಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಹೀಗಿರುವಾಗ ಸತತವಾಗಿ 14 ವರ್ಷಗಳಿಂದ ನೆಮ್ಮದಿ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅಲ್ಪ ಮೊತ್ತದ ಗೌರವ ಧನದಲ್ಲೇ ಜೀವನ ನಡೆಸುತ್ತಿದ್ದು, ವಯೋಮಿತಿ ಮೀರಿದ್ದು ನಮ್ಮೆಲ್ಲರ ಜೀವನ ದುಸ್ತರವಾಗಿರುತ್ತದೆ ಎಂದು ಯಾದಗಿರಿ ಅಪಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಜಿಲ್ಲಾ ಸಂಯೋಜಕ ಮಧುಸುದನ ಗುರು, ಶ್ರೀನಿವಾಸರೆಡ್ಡಿ ಪತ್ತಿ, ಗೌಡಪ್ಪ ಗೌಡ, ಭೀಮರೆಡ್ಡಿ ಹೈಯಾಳ್‌, ಇಮ್ರಾನ್‌, ಜಗಲಿಂಗು, ವೀರಣ್ಣ, ಭೀಮರೆಡ್ಡಿ, ಸಂತೋಷ, ಅನೀಲ್‌ ಕುಮಾರ ಇದ್ದರು.

ಹತ್ತು ವರ್ಷಗಳಿಂದ ರಾಜ್ಯಾದ್ಯಂತ ನಾಡ ಕಚೇರಿಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಯಾವುದೇ ಸೇವಾ ಭದ್ರತೆ ಇಲ್ಲದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾವಿರಾರು ಆಪರೇಟರ್‌ ಗಳ ಕುಟುಂಬಗಳು ಬೀದಿಪಾಲಾಗದಂತೆ ಕರ್ತವ್ಯದಲ್ಲಿ ಮುಂದುವರಿಸುವುದರ ಜೊತೆಗೆ ಸೇವಾ ಭದ್ರತೆ ನೀಡಿ ಸೇವೆ ಸಲ್ಲಿಸಲು ಅನುವು ಮಾಡಿಕೊಡಬೇಕು. -ಶ್ರೀನಿವಾಸ್‌ ರೆಡ್ಡಿ, ಪತ್ತಿ ಡೇಟಾ ಎಂಟ್ರಿ ಆಪರೇಟರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.