ಶಿಕ್ಷಣ ಕೊಡಿಸುವುದು ಪಾಲಕರ ಕರ್ತವ್ಯ


Team Udayavani, Jun 23, 2018, 4:50 PM IST

yadagiri-1.jpg

ಶಹಾಪುರ: ಪ್ರತಿಯೊಬ್ಬ ಮನುಷ್ಯನಿಗೆ ಬದುಕು ಅರ್ಥೈಸಿಕೊಳ್ಳಲು ಕಾನೂನು ಅರಿವು ಅಗತ್ಯ ಇರುವಂತೆ, ಬಡತನ, ಮೂಲಭೂತ ಸಮಸ್ಯೆಗಳ ನಿರ್ಮೂಲನೆಗೆ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಅವಶ್ಯವಾಗಿದೆ ಎಂದು ನಗರದ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಪ್ರಭು ಎನ್‌. ಬಡಿಗೇರ
ಹೇಳಿದರು.

ನಗರದ ಆದರ್ಶ ವಿದ್ಯಾಲಯದಲ್ಲಿ ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಕಚೇರಿ, ತಾಪಂ ಹಾಗೂ ತಾಲೂಕು ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆಗಾಗಿ ಕಾನೂನು ಕಾಯ್ದೆ ಇದೆ. ಮಕ್ಕಳಿಗೆ ಅದರ ಅನ್ವಯ ಸಂಪೂರ್ಣ ರಕ್ಷಣೆ ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಕರ್ತವ್ಯ, ಮಕ್ಕಳ ರಕ್ಷಣೆ ಕಾಯ್ದೆ ಪ್ರಕಾರ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾದಿತು ಎಂದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಕಚೇರಿ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಮಾತನಾಡಿ, ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ತಪ್ಪಿತಸ್ಥ ಮಾಲೀಕರುಗಳಿಗೆ 6 ತಿಂಗಳಿಂದ 2 ವರ್ಷ ಜೈಲು ಶಿಕ್ಷೆ ಅಥವಾ 20 ಸಾವಿರ ರೂಪಾಯಿಂದ 50 ಸಾವಿರ ರೂ. ವರೆಗೆ ದಂಡ ಅಥವಾ ಎರಡನ್ನೂ ಸಹ ನ್ಯಾಯಾಲಯ ವಿಧಿಸಬಹುದಾಗಿದೆ ಎಂದು ಎಚ್ಚರಿಸಿದರು. ಅಲ್ಲದೆ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಲು ಹಾಗೂ ನೆರವು ನೀಡಿದ ಪಾಲಕರ ಮೇಲೆಯೂ ಸಹ ಮೊಕದ್ದಮೆ ದಾಖಲಿಸಲಾಗುವುದು.

ವೇದಿಕೆಯಲ್ಲಿ ನಗರದ ಹೆಚ್ಚುವರಿ ಸಿವಿಲ್‌ ನ್ಯಾಧಿಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ ಸಮಿತಿಯ ಹಣಮಂತ್‌ರಾವ ಕುಲ್ಕರ್ಣಿ, ಉಪ ತಹಶೀಲ್ದಾರ್‌ ಶ್ರೀಧರಾಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಇಒ ಡಾ| ಎಸ್‌.ಕೆ. ಟಕ್ಕಳಕಿ, ಬಿಇಒ ಹಣಮಂತಪ್ಪ ನಾಟೇಕಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಪ್ಪ, ಪೌರಾಯುಕ್ತ ಬಸವರಾಜ ಶಿವಪೂಜೆ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾವುತಪ್ಪ ಹವಾಲ್ದಾರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ| ಹಣಮಂತ್ರಾಯ ಕರಡಿ, ಸದಸ್ಯರಾದ ಪ್ರೊ.ಜಿ.ಹೆಚ್‌. ಗೀತಾ, ವಕೀಲ ಚಂದ್ರಶೇಖರ ಲಿಂಗದಳ್ಳಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಾಲೋಮನ್‌ ಆಲ್‌ಫ್ರೆಡ್‌, ಆದರ್ಶ ವಿದ್ಯಾಲಯದ ಶಿಕ್ಷಕ ರವಿಚಂದ್ರ, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ಯಾದವ, ಪ್ರಕಾಶ ಚವ್ಹಾಣ, ಇಮ್ರಾನ್‌ ಖಾಜಿ ಡೈಮಂಡ್‌, ಅಹ್ಮದ್‌ ಹುಸೇನ್‌, ಶಿವಶಂಕರ ತಳವಾರ ಇದ್ದರು.

ಸಂಪನ್ಮೂಲ ವ್ಯಕ್ತಿಗಳಾದ ವಕೀಲ ಎಂ.ಎನ್‌. ಪೂಜಾರಿ, ಸಮಾಜ ಕಾರ್ಯಕರ್ತ ದಶರಥ ನಾಯಕ ಅವರು ಬಾಲ ಕಾರ್ಮಿಕ ಪದ್ಧತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅನಿತಾ ಬಡಿಗೇರ ಹಾಗೂ ವಿದ್ಯಾಲಯದ ಮಕ್ಕಳು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ನಗರದ ಬಹುತೇಕ ಶಾಲೆಗಳ ಮುಖ್ಯಗುರುಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕ ವೃಂದದವರು ಭಾಗವಹಿಸಿದ್ದರು.

ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ  ಜವಾಬ್ದಾರಿಯಾಗಿರುವ ಪ್ರಯುಕ್ತ ಈ ಯೋಜನೆಯಿಂದ ಸಾವಿರಾರು ಮಕ್ಕಳು ಜೀವನದಲ್ಲಿ ಆಶಾ ಕಿರಣ ಮೂಡಿಸಬಹುದಾಗಿದೆ.ಇದಕ್ಕೆ ಸರ್ವರೂ ಕೈ ಜೋಡಿಸುವ ಅಗತ್ಯವಿದೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ ಆಗಿರುವ ಪ್ರಯುಕ್ತ ಈ ಯೋಜನೆಯಿಂದ ಸಾವಿರಾರು ಮಕ್ಕಳ ಜೀವನದಲ್ಲಿ ಆಶಾ ಕಿರಣ ಮೂಡಿಸಬಹುದಾಗಿದೆ. ಇದಕ್ಕೆ ಸರ್ವರೂ ಕೈ ಜೋಡಿಸುವ ಅಗತ್ಯವಿದೆ.  

ರಘುವೀರಸಿಂಗ್‌, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಕಚೇರಿ ಯೋಜನಾ ನಿರ್ದೇಶಕ 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.