ರಾಘವೇಂದ್ರ ಶ್ರೀ ಪಟಾಭಿಷೇಕ ಮಹೋತ್ಸವ
Team Udayavani, Mar 12, 2019, 12:04 PM IST
ಯಾದಗಿರಿ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳು ಕಲಿಯುಗದ ಕಾಮಧೇನು ಎಂದು ಪ್ರಸಿದ್ಧರಾಗಿದ್ದಾರೆ.
ಅವರಲ್ಲಿ ಬೇಡಿಕೊಂಡು ಬಂದ ಭಕ್ತರ ಸಂಕಷ್ಟಗಳನ್ನ ಪರಿಹರಿಸುವ ಮಹಾನ್ ದೇವಾಂಶ ಸಂಭೂತರಾಗಿದ್ದರು ಎಂದು ಪಂ. ರಾಘವೇಂದ್ರಾಚಾರ್ಯ ಬಳಿಚಕ್ರ ಹೇಳಿದರು.
ನಗರ ಶ್ರೀ ರಾಘವೇಂದ್ರ ಪರಿಮಳ ಮಂಟಪದಲ್ಲಿ ರವಿವಾರ ಹಮ್ಮಿಕೊಂಡ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ
ಮತ್ತು ವರ್ಧಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಶ್ರೇಷ್ಠ ಸನ್ಯಾಸಿಯಾಗಿದ್ದ ಶ್ರೀಗಳು, ಹಲವು ಗ್ರಂಥಗಳನ್ನು ರಚಿಸಿ ಜ್ಞಾನವನ್ನು ಪಸರಿಸಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ಹೇಳಿದರು.
ಇನ್ನೋರ್ವ ಉಪನ್ಯಾಸಕ ಪಂ. ನರಸಿಂಹಾಚರ್ಯ ಪುರಾಣಿಕ ಮಾತನಾಡಿ, ಉತ್ತರಾದಿ ಮಠದ ಪೂಜ್ಯಶ್ರೀ ಸತ್ಯಾತ್ಮತೀರ್ಥರು ವೈರಾಗ್ಯ ಮತ್ತು ಮಹಾನ್ ತಪಸ್ವಿಯಾಗಿದ್ದಾರೆ. ಅವರು ತಮ್ಮಲ್ಲಿರುವ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಹಂಚುವ ಮೂಲಕ ಪಂಡಿತರ ತಂಡವನ್ನು ಸೃಷ್ಟಿಸಿದ್ದಾರೆ. ಸದಾ ಸಮಾಜದ ಹಿತವನ್ನು ಬಯಸುವ ಅವರು ಯುವಕರಲ್ಲಿ ಧಾಮಿಕ ಜಾಗೃತಿ ಮುಡಿಸಿದ್ದಾರೆ ಎಂದು ಹೇಳಿದರು.
ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ನಿಮಿತ್ತ ಬೆಳಗ್ಗೆ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ, ಶ್ರೀ ರಾಯರ ಅಷ್ಟೋತ್ತರ
ಮತ್ತು ಭಕ್ತ ಸಮೂಹದಿಂದ ವಿಶೇಷ ಪುಷ್ಪಾರ್ಚನೆ ಮಾಡಲಾಯಿತು. ಮಧ್ಯಾಹ್ನ ರಥೋತ್ಸವ ಹಾಗೂ ತೀರ್ಥ ಪ್ರಸಾದ ಜರಗಿತು. ಈ ಸಂದರ್ಭದಲ್ಲಿ ವಿಪ್ರ ಸಮಾಜದ ಅನೇಕ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…