ಕ್ಷೌರಿಕ ಅಂಗಡಿ ತೆರೆಯಲು ಅನುಮತಿ ನೀಡಿ
Team Udayavani, May 7, 2020, 3:29 PM IST
ರಾಯಚೂರು: ಕರ್ನಾಟಕ ರಾಜ್ಯ ಸವಿತಾ ಸಮಾಜದ ಸದಸ್ಯರು ಡಿಸಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ರಾಯಚೂರು: ಲೌಕ್ಡೌನ್ನಿಂದ ಮುಚ್ಚಿಸಿರುವ ಕ್ಷೌರಿಕ ಅಂಗಡಿ ತೆರೆಯಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ಸವಿತಾ ಸಮಾಜದ ಸದಸ್ಯರು ಒತ್ತಾಯಿಸಿದರು.
ಈ ಕುರಿತು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸವಿತಾ ಸಮಾಜದವರು ಕ್ಷೌರಿಕ ವೃತ್ತಿ ನಂಬಿ ಬಾಳುತ್ತಿದ್ದಾರೆ. ಕಳೆದೊಂದು ತಿಂಗಳಿಂದ ಆದಾಯವಿಲ್ಲದೇ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ನಿತ್ಯ ಕೆಲಸ ಮಾಡಿದರೆ ಮಾತ್ರ ಉಪಜೀವನ ನಡೆಸಲು ಸಾಧ್ಯ. ಈಗಾಗಲೇ ಎಲ್ಲ ವಹಿವಾಟು ಮಾಡಲು ಸರ್ಕಾರ ಅವಕಾಶ ನೀಡಿದೆ. ಅದರಂತೆ ಕ್ಷೌರಿಕ ಅಂಗಡಿಗೂ ಅನುಮತಿ ನೀಡಬೇಕು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಟೋಕನ್ ಮಾದರಿಯಲ್ಲಿ ಅವಕಾಶ ನೀಡಲಾಗಿದೆ. ಅದೇ ರೀತಿ ನಮ್ಮ ಜಿಲ್ಲೆಯಲ್ಲೂ ಅವಕಾಶ ನೀಡುವಂತೆ ಕೇಳಿಕೊಂಡರು. ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿಜಯ ಭಾಸ್ಕರ ಇಟಗಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಘವೇಂದ್ರ ಇಟಗಿ, ತಾಲೂಕು ಅಧ್ಯಕ್ಷ ಭೀಮೇಶ ಗುಂಜಳ್ಳಿ. ನಗರ ಅಧ್ಯಕ್ಷ ವಿ. ಗೋವಿಂದ, ಸದಸ್ಯರಾದ ವಡವಾಟಿ ಗೋಪಾಲ, ಉರುಕುಂದಪ್ಪ, ಎಂ.ರಾಮಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ