ಯಾದಗಿರಿಯಲ್ಲಿ ಗುಡುಗು ಸಹಿತ ಭಾರೀ ಮಳೆ
Team Udayavani, Apr 5, 2021, 5:42 PM IST
ಯಾದಗಿರಿ : ಜಿಲ್ಲೆಯಲ್ಲಿ ಏಕಾಏಕಿ (ಸಂಜೆ 4:15ರ ಸುಮಾರಿಗೆ) ಮೋಡ ಕವಿದ ವಾತಾವರಣ ನಿರ್ಮಾಣಗೊಂಡು ಸುಮಾರು ಅರ್ಧಗಂಟೆ ಕಾಲ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ.
ಜಿಲ್ಲಾ ಕೇಂದ್ರದ ಸುತ್ತಮುತ್ತ ಸುರಿದಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗಾಳಿ ಮಳೆಯ ರಭಸಕ್ಕೆ ನಗರಸಭೆಯ ಸಭಾಂಗಣದ ಪತ್ರಾಸ್ ಗಳ ಮೇಲ್ಚಾಚಣೆಯೇ ಹಾರಿಹೋಗಿದ್ದು ಸಭಾಂಗಣದಲ್ಲಿದ್ದ ದಾಖಲೆಗಳು ನೀರಿನಲ್ಲಿ ನೆನೆದು ಹೋಗಿವೆ. ಅಲ್ಲದೆ ಕುರ್ಚಿ ಟೇಬಲ್ ಗಳಿಗೆ ಹಾನಿಯಾಗಿದೆ.
ಚಿತ್ತಾಪುರ ರಸ್ತೆಯ ಯೂನಿಯನ್ ಬ್ಯಾಂಕ್ ಹತ್ತಿರ ಬೃಹತ್ ಗಾತ್ರದ ನಾಮಫಲಕ ಹಾರಿ ದ್ವಿಚಕ್ರ ವಾಹನಗಳ ಮೇಲೆ ಬಿದ್ದಿರುವುದರಿಂದ ಕೆಲ ವಾಹನಗಳು ಜಖಂಗೊಂಡಿವೆ.
ಜಿಲ್ಲಾ ಕೇಂದ್ರದ ಸುತ್ತಮುತ್ತ ಸುರಿದಿರುವ ಮಳೆಯಿಂದ ಸಣ್ಣ ಪುಟ್ಟ ಹಾನಿಯಾಗಿದ್ದು, ಶಹಾಪುರದಲ್ಲಿ ಅಲ್ಪ ಮಳೆ ಸುರಿದಿದ್ದು, ಖಾನಾಪುರದಿಂದ ಯಾದಗಿರಿ ಮಾರ್ಗದ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಯಲ್ಲಿ ಮುರಿದು ಬಿದ್ದಿದ್ದು ಸಂಚಾರಕ್ಕೆ ಅಡೆತಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್