ಬಾಕಿ 35 ಕೋಟಿ ರೂ. ಬಿಡುಗಡೆಗೊಳಿಸಿ; ಟಿ.ಕೃಷ್ಣಪ್ಪಗೌಡ
ಪಡಿತರ ವಿತರಕರಿಗೆ 200 ರೂ. ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
Team Udayavani, Feb 10, 2021, 6:24 PM IST
ಯಾದಗಿರಿ: ಕೆಲ ರಾಜ್ಯಗಳಲ್ಲಿ ಪಡಿತರ ವಿತರಕರ ಕಮಿಷನ್ 200ರಿಂದ 250 ರೂ. ನೀಡಲಾಗುತ್ತಿದ್ದು, ರಾಜ್ಯದಲ್ಲಿಯೂ ಕಮಿಷನ್ ಹೆಚ್ಚಳ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಕ್ರಮಕೈಗೊಳ್ಳಲು ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಡಾ| ಟಿ.ಕೃಷ್ಣಪ್ಪಗೌಡ ಒತ್ತಾಯಿಸಿದರು.
ನಗರದಲ್ಲಿ ಮಂಗಳವಾರ ನಡೆದ ಜಿಲ್ಲಾ ಪಡಿತರ ವಿತರಕರ ಸಂಘದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯಾದ್ಯಂತ ಈಗಾಗಲೇ ಪಡಿತರ ವಿತರಕರಿಗೆ ಬಾಕಿ ಇರುವ 35 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಬಾಕಿ ಇರುವ 100 ಕೋಟಿ ರೂ.ಗಳು ಶೀಘ್ರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳಿಗೆ ಮನವೊಲಿಸುವುದಾಗಿ ಹೇಳಿದರು.
ಕರ್ನಾಟಕದಲ್ಲಿ ನಮ್ಮ ಸಂಘಟನೆ ಹೋರಾಟ ಮಾಡುತ್ತಾ ಬಂದ ಪರಿಣಾಮ 15 ರೂ.ಗಳಿಂದ 60 ರೂ.ಗಳು ನಂತರ 75 ರೂ.ಗಳು ಇದ್ದುದ್ದನ್ನು ಈದೀಗ 100 ರೂ.ಗಳಿಗೆ ಸರ್ಕಾರ ಹೆಚ್ಚಳ ಮಾಡಿದ್ದು, ಪಡಿತರ ವಿತರಕರಿಗೆ 200 ರೂ. ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪಡಿತರ ವಿತರಕರ ಸಂಘದ ಅಧ್ಯಕ್ಷ ಆರ್. ಮಹಾದೇವಪ್ಪ ಅಬ್ಬೆತುಮಕೂರು ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಕಾರ್ಜುನ ನಾಯಕ, ಚೆನ್ನಮಲ್ಲಪ್ಪ ಘಂಟಿ, ಚೆನ್ನಕೇಶವ ಗೌಡ ಮಂಡ್ಯ, ಬಿ. ದೇವರಾಜು, ಬಿ. ಸುಬ್ಬರಾಜು, ಸೋಮನಾಥ ರೆಡ್ಡಿ ಬಾಲಚೇಡ್, ಚಂದ್ರಶೇಖರ ಕುರ್ಡಿ, ರವಿ ಶಿರಸ್ತೆದಾರ ಯಾದಗಿರಿ, ಚೆನ್ನಕೇಶವ ನಾಯಕ ರಾಯಚೂರು, ಹನುಮೇಶ, ಬಸವರಾಜಪ್ಪ ಗೌಡ, ಸೋಮಶೇಖರಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ