ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ
Team Udayavani, Oct 21, 2018, 4:54 PM IST
ಯಾದಗಿರಿ: ಧಾರ್ಮಿಕ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ದೊರೆಯಲು ಸಾಧ್ಯ ಎಂದು ಹೆಡಗಿಮದ್ರದ ಶಾಂತ ಶಿವಯೋಗಿ ಮಠದ ಪೂಜ್ಯ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ನವರಾತ್ರಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬಂಗಾರಮ್ಮ ದೇವಿ ಪುರಾಣ ಮಂಗಳ ಮತ್ತು ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಮಾನವರು ಭೂಮಿ ಮೇಲೆ ಸಂಪಾದಿಸಿದ್ದು, ಯಾವುದೂ ಶಾಶ್ವತವಲ್ಲ. ಇದನ್ನು ಅರಿತು ಜೀವನದಲ್ಲಿ ಕೆಲ ಹೊತ್ತು ಧಾರ್ಮಿಕ ಕಾರ್ಯಗಳಿಗಾಗಿ ಮೀಸಲಿರಿಸಬೇಕು ಎಂದು ಹೇಳಿದರು.
ಆಧುನಿಕ ದಿನಗಳ ಜೀವನ ಶೈಲಿಯಲ್ಲಿ ಭಗವಂತನ ನಾಮ ಸ್ಮರಣೆ ಮರೆಯಬಾರದು. ಪ್ರತಿ ಕಣ ಕಣದಲ್ಲಿಯೂ ಭಗವಂತನಿದ್ದಾನೆ. ಗ್ರಾಮಸ್ಥರೆಲ್ಲರೂ ಸೇರಿ ಬಂಗಾರಮ್ಮ ದೇವಿ ಪುರಾಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯ.
ಇಂದಿನ ಪೀಳಿಗೆಗೆ ಧಾರ್ಮಿಕ ವಿಚಾರಗಳು ತಲೆ ಹೊಕ್ಕುವ ರೀತಿಯಲ್ಲಿ ತಿಳಿಸುವ ಅವಶ್ಯಕತೆ ಇದೆ. ನವರಾತ್ರಿ ಆಚರಣೆ ವಿಶೇಷತೆಗಳನ್ನು ವಿವರಿಸಿದರು. ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಆಚರಣೆಗಳಿಂದಲೇ ನಮ್ಮ ದೇಶದ ಸಂಸ್ಕೃತಿ ಅಚ್ಚಳಿಯದೇ ತನ್ನತನವನ್ನು ಉಳಿಸಿಕೊಂಡಿದ್ದು, ಬೆಳೆಯುತ್ತಿರುವ ನಗರ ಪ್ರದೇಶಗಳ ಜನರಲ್ಲಿ ಭಯ ಭಕ್ತಿ ಕುಂಠಿತಗೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ. ಆದರೇ ಹಳ್ಳಿಗಳಿಂದಲೇ ನಮ್ಮ ಸಂಸ್ಕಾರ ಉಳಿಯಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ವೀರಭದ್ರಯ್ಯ ಹಿರೇಮಠ, ಶರಣಗೌಡ, ಬಂಗಾರಪ್ಪ ಜೀವನ್ನೋರ, ಚಂದಪ್ಪ, ಮಹಾದೇವಪ್ಪ ಜಲ್ಲಪ್ಪನೋರ, ಸಿದ್ದಲಿಂಗಪ್ಪ, ಬಾಬುಗೌಡ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಮುತ್ತೆದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ