ಸಂಕಷ್ಟ ಪರಿಹಾರಕ್ಕೆ ಶ್ರೀಕೃಷ್ಣನ ಸ್ಮರಣೆ ಅತ್ಯಗತ್ಯ
Team Udayavani, Aug 20, 2022, 3:28 PM IST
ಯಾದಗಿರಿ: ಸಾಂಸಾರಿಕ ಕ್ಲೇಷ, ತೊಂದರೆಗಳಿಂದ ಪರಿಹಾರ ಪಡೆಯಲು ಶ್ರೀಕೃಷ್ಣನ ಸ್ಮರಣೆ ಅತ್ಯಗತ್ಯ ಎಂದು ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ ಹೇಳಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀಕೃಷ್ಣ ಜಯಂತ್ಯುತ್ಸವ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಉದ್ಘಾಟಿಸಿ, ಯಾದವ ಜನಾಂಗಕ್ಕಾಗಿ ಸಮುದಾಯ ಭವನಕ್ಕಾಗಿ ಅವಶ್ಯಕತೆ ಇರುವ ನಿವೇಶನದ ವ್ಯವಸ್ಥೆ ಕಲ್ಪಿಸಲಾಗುವುದೆಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರುಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ, ಯಾದವ ಸಮಾಜದ ಅಧ್ಯಕ್ಷ ತಾಯಪ್ಪ ಯಾದವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ ಸೇರಿದಂತೆ ಯಾದವ ಸಮಾಜದವರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ