ಎಲ್ಲ ಶಿಥಿಲಾವಸ್ಥೆ ಶಾಲೆ ನವೀಕರಣ


Team Udayavani, Aug 13, 2019, 2:29 PM IST

yg-tdy-2

ಕೆಂಭಾವಿ: ನಗನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡಕ್ಕೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಶಿಲಾನ್ಯಾಸ ನೆರವೇರಿಸಿದರು.

ಕೆಂಭಾವಿ: ನನ್ನ ಕ್ಷೇತ್ರದಲ್ಲಿ ಸಂಪೂರ್ಣ ಶಿಥಿಲಾವಸ್ಥೆ ತಲುಪಿರುವ ಎಲ್ಲ ಪ್ರಾಥಮಿಕ, ಪೌಢಶಾಲೆ ಹಾಗೂ ಕಾಲೇಜು ಕಟ್ಟಡಗಳನ್ನು ಹಂತಹಂತವಾಗಿ ನವೀಕರಣ ಮಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗನೂರ ಗ್ರಾಮದಲ್ಲಿ ಸೋಮವಾರ ಎಚ್ಕೆಆರ್‌ಡಿಬಿ ಯೋಜನೆಯಡಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶದ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಹಲವು ಯೋಜನೆ ರೂಪಿಸಿದೆ. ಅಂತಹ ಯೋಜನೆಗಳ ಸದುಪಯೋಗ ಪಡೆದು ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದೆ ಬರಬೇಕು ಎಂದು ಹೇಳಿದರು.

ಇತ್ತೀಚೆಗೆ ನೆರೆ ಹಾವಳಿಯಿಂದ ಜಿಲ್ಲೆಯ ಅನೇಕ ಗ್ರಾಮಗಳು ಕೃಷ್ಣಾ ನೀರಿನಲ್ಲಿ ಮುಳುಗಡೆಯಾಗಿವೆ. ಇದರಿಂದ ಅನೇಕ ಕುಟುಂಬಗಳು ಬೀದಿಪಾಲಾಗಿವೆ. ಅಂತಹ ಕುಟುಂಬಗಳ ನೆರವಿಗೆ ಧನ ಸಹಾಯ, ಆಹಾರಾಧಾನ್ಯ, ಬಟ್ಟೆಬರೆ ಸೇರಿದಂತೆ ವಿವಿಧ ರೀತಿಯ ಸಹಾಯ ನೀಡುವಂತೆ ಜನರಲ್ಲಿ ಮನವಿ ಮಾಡಿದರು. ನಂತರ ಗ್ರಾಮಸ್ಥರ ಕುಂದುಕೊರತೆ ವಿಚಾರಿಸಿದರು.

ದಾಸೋಹ ಮಠದ ಶರಣಪ್ಪ ಶರಣರು, ಗ್ರಾಪಂ ಅಧ್ಯಕ್ಷ ಶಾಂತಣ್ಣ ಚನ್ನೂರ, ಮುಖಂಡರಾದ ಶಂಕ್ರಣ್ಣ ವಣಕ್ಯಾಳ, ಅಶೋಕ ಗೂಗಲ, ಬಸನಗೌಡ ಹೊಸಮನಿ, ಗುರಪ್ಪಗೌಡ ಪೊಲೀಸ್‌ಪಾಟೀಲ, ಸಿದ್ರಾಮರೆಡ್ಡಿ ಗೂಗಲ, ಶಿವರಾಜ ಬೂದೂರ, ಹಳ್ಳೆಪ್ಪ ಹವಾಲ್ದಾರ, ಚನ್ನಬಸಪ್ಪ ದೇಸಾಯಿ, ಶಿವಮಹಾಂತ ಚಂದಾಪುರ, ರಾಮಣ್ಣ ದೇಶಪಾಂಡೆ, ರಾವಸಾಬ ದೇಸಾಯಿ, ಚನ್ನಾರೆಡ್ಡಿ ದೇಸಾಯಿ, ಶ್ರೀಮಂತ ತಿಪ್ಪಶೆಟ್ಟಿ, ಕರ್ನಾಟಕ ಭೂಸೇನಾ ನಿಗಮದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.