12 ಗಂಟೆ ವಿದ್ಯುತ್ ಸರಬರಾಜಿಗೆ ಆಗ್ರಹ
Team Udayavani, Mar 3, 2020, 2:19 PM IST
ಯಾದಗಿರಿ: ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಆಗುತ್ತಿಲ್ಲವೆಂದು ಆಕ್ರೋಶಗೊಂಡ ರೈತರು ವಡಗೇರಾ ಕ್ರಾಸ್ ರಸ್ತೆಯಿಂದ ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ರೈತರು ಭತ್ತ ಬೆಳೆದಿದ್ದು, ಸಮರ್ಪಕ ವಿದ್ಯುತ್ ಇಲ್ಲದೇ ಬೆಳೆ ಒಣಗುತ್ತಿದ್ದು, ರೈತರ ಸಂಕಷ್ಟ ಕೇಳುವವರಿಲ್ಲದಂತಾಗಿದೆ ಎಂದು ರೈತ ಮುಖಂಡರು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಕೇವಲ 7 ಗಂಟೆ ವಿದ್ಯುತ್ ಸರಬರಾಜುಗೊಳ್ಳುತ್ತಿದ್ದು, ಇದರಲ್ಲಿ 2-3 ಗಂಟೆ ಲೈನ್ ಪಾಲ್ಟ್ ಎಂದು ಕಡಿತಗೊಳಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ವೇಳೆ 18 ಗಂಟೆ ವಿದ್ಯುತ್ ನೀಡಲಾಗುತ್ತಿತ್ತು. ಈಗ ಏಕಾಏಕಿ 7 ಗಂಟೆಗೆ ಇಳಿಕೆಯಾಗಿದ್ದು, ಇದರಿಂದ ರೈತರು ಕಂಗಾಲಾಗುವಂತೆ ಮಾಡಿದೆ ಎಂದು ತಿಳಿಸಿದರು.
ಜಿಲ್ಲೆಯ ರೈತರ ಅನುಕೂಲಕ್ಕೆ 12 ಗಂಟೆ ವಿದ್ಯುತ್ ಸರಬರಾಜು ಮಾಡಲು ಮುಂದಾಗಬೇಕು ಎಂದು ಆಗ್ರಹಿಸಿದ ರೈತರು, ಬೇಡಿಕೆ ಈಡೇರಿಸದಿದ್ದರೇ ಮಾರ್ಚ್ 10ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟ ಧರಣಿ ನಡೆಸುವ ಎಚ್ಚರಿಕೆ ನೀಡಿದರು.
ನಂತರ ಸ್ಥಳಕ್ಕೆ ಆಗಮಿಸಿ ಜೆಸ್ಕಾಂ ಅಧಿಕಾರಿ ರಾಘವೇಂದ್ರ ರೈತರಿಂದ ಮನವಿ ಸ್ವೀಕರಿಸಿದರು. ನವ ಕರ್ನಾಟಕ ರೈತ ಸಂಘಟನೆ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ಚಿಗಾನೂರ, ಮಹಾದೇವಪ್ಪ, ಮಹಾದೇವಪ್ಪ ಚನ್ನೂರ, ಅಶೋಕರೆಡ್ಡಿ ಕುರಿಹಾಳ, ಮಲ್ಲಣ್ಣಗೌಡ ಗಡ್ಡೆಸೂಗೂರ, ಹಣಮರೆಡ್ಡಿ ರೋಟ್ನಡಗಿ, ಗುರುಗೌಡ ಕದರಾಪುರ, ಅಂಬ್ರೇಶ ಗೌಡ, ಅಮೃತರೆಡ್ಡಿ ಕೊಂಕಲ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ