18 ತಾಸು ವಿದ್ಯುತ್ ಪೂರೈಕೆಗೆ ಮನವಿ
Team Udayavani, Jan 14, 2020, 1:09 PM IST
ಯಾದಗಿರಿ: ಭೀಮಾ ನದಿ ಮತ್ತು ಕೃಷ್ಣಾ ನದಿ ತೀರದ ರೈತರ ಪಂಪ್ಸೆಟ್ಗಳಿಗೆ ದಿನದಲ್ಲಿ 18 ತಾಸು ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾ ಭೀಮಾ ಮತ್ತು ಕೃಷ್ಣಾ ನದಿ ನೀರು ಹಾಗೂ ವಿದ್ಯುತ್ ಬಳಕೆದಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಯಾದಗಿರಿ ಜಿಲ್ಲೆ ಅತಿ ಹಿಂದುಳಿದಿದೆ. ಎರಡು ವರ್ಷಗಳಿಂದ ಸರಿಯಾಗಿ ಮಳೆಯಾಗದೇ ಬರಗಾಲದಿಂದ ಈ ಭಾಗದ ರೈತರಿಗೆ ತತ್ತರಿಸಿದ್ದಾರೆ. ಈ ವರ್ಷ ನೆರೆ ಪ್ರವಾಹದಿಂದ ಬೆಳೆ ಹಾಳಾಗಿದೆ. ಇದರಿಂದ ರೈತರು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರಸ್ತುತ ಭೀಮಾ ನದಿಯಿಂದ ಮತ್ತು ಕೃಷ್ಣಾ ನದಿಯಿಂದ ಪೈಪ್ಲೈನ್ ಮೂಲಕ ನೀರಾವರಿ ಮಾಡಿ ಬೆಳೆ ಬೆಳೆಯುತ್ತಿದ್ದು, ಪಂಪ್ಸೆಟ್ಗಳಿಗೆ ಕೇವಲ 7 ತಾಸು ವಿದ್ಯುತ್ ನೀಡುತ್ತಿರುವುದರಿಂದ ಭತ್ತದ ಬೆಳೆಗೆ ನೀರು ಕಡಿಮೆಯಾಗಿ ರೈತರು ಪರಿತಪಿಸುವಂತಾಗಿದೆ ಎಂದು ಅಳಲು ತೋಡಿಕೊಂಡರು.
ಬೇಸಿಗೆಯಲ್ಲಿ ಬೆಳೆ ಬೆಳೆಯಲು ದಿನದಲ್ಲಿ ಕನಿಷ್ಠ 18 ತಾಸು ವಿದ್ಯುತ್ ಪೂರೈಕೆ ಮಾಡಿದ್ದಲ್ಲಿ ಬಡ ರೈತರು, ಕೂಲಿಕಾರ್ಮಿಕರಿಗೆ ಅನುಕೂಲವಾಗುತ್ತದೆ. ಇದರಿಂದ ರೈತರು, ಕೂಲಿಕಾರ್ಮಿಕರು, ಬಡವರು ನಗರಗಳಿಗೆ ಉದ್ಯೋಗ ಅರಿಸಿ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲದೇ ದುಡಿಯುವ ಕೈಗಳಿಗೆ ಕೆಲಸ ಸಿಗುತ್ತದೆ. ರೈತರಿಗೆ, ಕಾರ್ಮಿಕರಿಗೆ ಮತ್ತು ಬಡವರಿಗೆ ಅನುಕೂಲವಾಗುವಂತೆ ಕ್ರಮವಹಿಸಲು ಆಗ್ರಹಿಸಿದರು.
ಯಾದಗಿರಿ ಜಿಲ್ಲಾ ಭೀಮಾ ಮತ್ತು ಕೃಷ್ಣಾ ನದಿ ನೀರು ಹಾಗೂ ವಿದ್ಯುತ್ ಬಳಕೆದಾರರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀ ರಡ್ಡಿ ಅನಪೂರ, ಕಾರ್ಯದರ್ಶಿ ವೈಜನಾಥ ಪಾಟೀಲ, ಶಾಂತಪ್ಪಗೌಡ ದೇಸಾಯಿ, ಹಣಮಂತ್ರಾಯಗೌಡ ಮುಷ್ಟರ, ಮಲ್ಲನಗೌಡ ಹೊಸ್ಮನಿ, ಕೌಳ್ಳೂರು, ಮಹಾದೇವಪ್ಪಗೌಡ ಅಬ್ಬೆತುಮಕೂರ, ಬಸವಂತರಾಗೌಡ ನಾಯ್ಕಲ, ಗುರುನಾಥರಡ್ಡಿಗೌಡ ಕದರಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ