ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಮನವಿ
Team Udayavani, Jun 18, 2022, 5:09 PM IST
ಗುರುಮಠಕಲ್: ಸರಕಾರ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಬೇಕು. ಸರಕಾರದ ಸೌಲಭ್ಯಗಳು ಎಲ್ಲರಿಗೂ ದೊರೆಯುವಂತೆ ಮಾಡಬೇಕೆಂದು ಆಗ್ರಹಿಸಿ ಎನ್ಎಸ್ಯು ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವ ನಾಗೇಶ ಅವರಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ ಬಸವೇಶ್ವರ ವೃತ್ತದವರೆಗೆ ರ್ಯಾಲಿ ನಡೆಸಿ, ಮನವಿ ಸಲ್ಲಿಸಿದರು. ಈ ವೇಳೆ ಸಂಘದ ಜಿಲ್ಲಾ ಉಪಾಧ್ಯಕ್ಷ ಪಾವನಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬೇಧ ಭಾವ ಮೂಡಿಸುವ ಮೂಲಕ ಕೇವಲ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ಪಾಸ್ ನೀಡಿ ಉಳಿದ ಒಬಿಸಿ, ಸಾಮಾನ್ಯ, ಅಲ್ಪಸಂಖ್ಯಾತರ ಬಡ ಮಕ್ಕಳಲ್ಲಿ ತಾರತಮ್ಯ ಎಸಗುವ ಧೋರಣೆ ಕೈಬಿಡುವಂತೆ ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಹೊನ್ನಪ್ಪ ದೊಡ್ಡಮನಿ, ಜಿಲ್ಲಾ ಕಾರ್ಯದರ್ಶಿ ಮಹ್ಮದ್ರಫಿಕ್, ಎಂ.ಡಿ. ರಫಿಕ್ ಚಿನ್ನಕಾರ, ಶರಣುರಡ್ಡಿ ನಜರಾಪುರ, ಹುಸೇನಪ್ಪ ಪುಲಿ ನಜರಾಪೂರ, ಮಹಿಬೂಬಸಾಬ್ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ