ಅವ್ಯವಹಾರ ತನಿಖೆಗೆ ಆಗ್ರಹ
Team Udayavani, Jan 14, 2020, 1:12 PM IST
ವಡಗೇರಾ: ತಾಲೂಕಿನ ಕುರಕುಂದ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಹಾಗೂ ಅಭಿಯಂತರರು ಸೇರಿ ಸರ್ಕಾರದ ನಿಯಮ ಗಾಳಿಗೆ ತೂರಿ 2015-16 ರಿಂದ 2019-20 ರವಗೆ 14ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆಸಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ವಾಭಿಮಾನ ಕನ್ನಡ ಸೇನೆ ಕಾರ್ಯಕರ್ತರು ಜಿಪಂ ಉಪ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ಮಾಡದೇ ಬಿಲ್ ಸೃಷ್ಟಿಸಿ ಸರ್ಕಾರದ ಹಣ ದುರ್ಬಳಕೆ ಮಾಡಿದ್ದು, ಪ್ರಸಕ್ತ ಸಾಲಿನ 9 ಲಕ್ಷ ರೂ. ಹಣ ಡ್ರಾ ಮಾಡಲಾಗಿದೆ ಎಂದು ದೂರಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮಂಜೂರಾದ ವಸತಿ ಮನೆಗಳನ್ನು ಗ್ರಾಮಸಭೆ, ವಾರ್ಡ್ ಗಳಲ್ಲಿ ಚರ್ಚೆ ಮಾಡಿ ಫಲಾನುಭವಿಗಳ ಆಯ್ಕೆ ಮಾಡದೇ ಸದಸ್ಯರು ಸೂಚಿಸಿದ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ.
ಇದರಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಶೌಚಾಲಯ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದವರಿಗೆ ಕೂಲಿ ನೀಡುತ್ತಿಲ್ಲ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಒ, ಜೆಇ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಯಲ್ಲಪ್ಪ ಕುರಕುಂದಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!