ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ಮನವಿ
Team Udayavani, Jun 1, 2022, 2:59 PM IST
ಕೆಂಭಾವಿ: ಪಟ್ಟಣದಲ್ಲಿ ಸರ್ಕಾರಿ ಕಚೇರಿಗಳು ಮತ್ತು ವ್ಯಾಪಾರ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ನವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಉಪ ತಹಶೀಲ್ದಾರ್ ಮಲ್ಲಿಕಾರ್ಜುನ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕನಸೇ ಜಿಲ್ಲಾ ಸಂಚಾಲಕ ಸೋಮನಾಥ ಬಡಿಗೇರ, ಪಟ್ಟಣದಲ್ಲಿ ಹಲವು ವಾಣಿಜ್ಯ ಅಂಗಡಿಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಅನ್ಯ ಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ. ಇದಲ್ಲದೇ ಹಲವು ಬಡಾವಣೆಗಳಲ್ಲಿ ಬೇರೆ ರಾಜ್ಯದ ಭಾಷೆಗಳು ಎದ್ದು ಕಾಣುತ್ತಿದ್ದು, ಇವೆಲ್ಲವನ್ನು ವಾರದೊಳಗೆ ತೆರವುಗೊಳಿಸಿ ಕನ್ನಡ ನಾಮಫಲಕಗಳನ್ನು ಹಾಕದಿದ್ದರೆ ನಮ್ಮ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಅನ್ಯ ಭಾಷೆ ನಾಮಫಲಕಗಳನ್ನು ತೆಗೆದು ಹಾಕಿ ಕನ್ನಡದ ನಾಮಫಲಕಗಳನ್ನು ಹಾಕಲು ಮುಂದಾಗುತ್ತೇವೆ ಎಚ್ಚರಿಸಿದರು.
ನರಸಿಂಗಪ್ಪ ಗೌಡೂರ, ಕೃಷ್ಣಪ್ಪ ತಳವಾರ, ಶಿವು ಸಾಸನೂರ, ಎಂ.ಕೆ. ಪೂಜಾರಿ, ವಿಜಯ ನಾಯಕ, ಮೌನೇಶ ತಳವಾರ, ಮಾಳಪ್ಪ, ಮಲ್ಲಿಕಾರ್ಜುನ, ಮೋಹನ ಬಡಿಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು