ಕೂಲಿ ಸಮಾಜ ಎಸ್ಟಿಗೆ ಸೇರಿಸಲು ಮನವಿ
Team Udayavani, Apr 12, 2022, 3:12 PM IST
ಸೈದಾಪುರ: ಕೂಲಿ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿ ತಾಪಂ ಮಾಜಿ ಸದಸ್ಯ ಚಂದಪ್ಪ ಕಾವಲಿ ನೇತೃತ್ವದಲ್ಲಿ ಕೂಲಿ ಸಮಾಜದ ಮುಖಂಡರು ಕೇಂದ್ರ ಸಚಿವೆ ಸಾದ್ವಿ ನಿರಂಜನ ಜ್ಯೋತಿಗೆ ಅವರಿಗೆ ಕಲಬುರಗಿ ನಗರದಲ್ಲಿ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕೂಲಿ ಸಮಾಜದ ಮುಖಂಡ ಚಂದಪ್ಪ ಕಾವಲಿ, ನಮ್ಮ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವುದು ಅನೇಕ ಆಯೋಗಗಳಿಂದ ತಿಳಿದು ಬಂದ ವಿಷಯ. ಆದರಿಂದ ನಮ್ಮ ಸಮುದಾಯವನ್ನು ಎಸ್ಟಿ ಸೇರಿಸಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆದಿದೆ. ಅದೇ ರೀತಿಯಾಗಿ ರಾಜ್ಯ ಸರ್ಕಾರವು ಕೇಂದ್ರ ಬುಡಕಟ್ಟು ಅಭಿವೃದ್ಧಿ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗದಿರುವುದು ನೋವಿನ ಸಂಗತಿ. ಆದ್ದರಿಂದ ತಾವುಗಳು ಕೇಂದ್ರ ಮಟ್ಟದಲ್ಲಿ ಎಸ್ಟಿ ಸೇರ್ಪಡೆಗೆ ಇರುವ ಅಡೆತಡೆ ಬಗೆಹರಿಸಿ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಅಮರೇಶ್ವರಿ ಚಿಂಚನಸೂರು, ಶಂಕ್ರಪ್ಪಗೌಡ ಬಾಲಛೇಡ್, ಕೂಲಿ ಸಮಾಜದ ಮುಖಂಡ ಸುರೇಶ ಆನಂಪಲ್ಲಿ, ಬಿಜೆಪಿ ಯುವ ಮುಖಂಡ ವಿಜಯಕುಮಾರ ಚಿಂಚನಸೂರ, ಅಂಜನೇಯ ಕಾವಲಿ, ಸಾಬಣ್ಣ ಬಾಗ್ಲಿ, ಚಂದ್ರಶೇಖರ ಬಾಡಿಯಾಲ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್