ನೂತನ ಪಠ್ಯ ರದ್ದುಗೊಳಿಸಲು ಆಗ್ರಹ


Team Udayavani, Jun 16, 2022, 3:54 PM IST

17text

ಶಹಾಪುರ: ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಇತಿಹಾಸ ತಿರುಚುವ ಕೆಲಸ ಮಾಡಿದ್ದು, ಡಾ| ಅಂಬೇಡ್ಕರ್‌ ಅವರ ಕುರಿತು ಗೌರವ ಪೂರ್ಣವಾದ ಸಂವಿಧಾನ ಶಿಲ್ಪಿ ಪದವನ್ನು ಸಹ ತೆಗೆದು ಹಾಕಿರುವುದು ನೋಡಿದರೆ, ಪ್ರಸ್ತುತ ಸರ್ಕಾರದ ರಾಜಕೀಯ ಮನಸ್ಥಿತಿ ಅರ್ಥ ಆಗಲಿದೆ. ಕೂಡಲೇ ನೂತನ ಪಠ್ಯ ಮಕ್ಕಳಿಗೆ ಶಿಕ್ಷಣ ಕೊಡಬೇಡಿ. ಈ ಮೊದಲಿನ ಹಳೇ ಪುಸ್ತಕ ಪ್ರಕಾರವೇ ಮಕ್ಕಳು ಶಿಕ್ಷಣ ಪಡೆಯಲಿ ಎಂದು ಡಿಎಸ್‌ಎಸ್‌ ಮುಖಂಡ ಶಿವಪುತ್ರ ಜವಳಿ ಆಗ್ರಹಿಸಿದರು.

ತಹಶೀಲ್ದಾರ್‌ ಕಚೇರಿ ಮುಂದೆ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ನಡೆದ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪಠ್ಯ ಪುಸ್ತಕ ಮರು ಪರಿಷ್ಕರಣೆ ಸಮಿತಿಯಲ್ಲಿ ಹೆಚ್ಚಿನವರು ಬ್ರಾಹ್ಮಣರಿದ್ದು, ಇವರೆಲ್ಲ ಹಿಂದುಳಿದ, ದಲಿತ ಸಮುದಾಯದ ಮಹಾನ್‌ ವ್ಯಕ್ತಿಗಳ ಮಹಾತ್ಮರ ಚರಿತ್ರೆಯನ್ನು ತಿರುಚುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಚಕ್ರತೀರ್ಥ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಆತನ ವಿಕೃತ ನಡವಳಿಕೆ ಕುರಿತು ಸಾಕಷ್ಟು ವಿಚಾರಗಳು ಬಯಲಾಗಿವೆ. ಆತನ ಮನಸ್ಥಿತಿ ಏನೆಂಬುದು ಗೊತ್ತಾಗಿದೆ. ಇಂತಹ ಕೀಳು ಮಟ್ಟದ ವ್ಯಕ್ತಿತ್ವ ಹೊಂದಿದ ಚಕ್ರತೀರ್ಥನನ್ನು ಪಠ್ಯ ಪುಸ್ತಕ ಪರಿಷ್ಕರಣೆ ನೇತೃತ್ವ ನೀಡಿರುವುದು ಆಘಾತಕಾರಿ ವಿಷಯವಾಗಿದೆ. ಈ ಕೂಡಲೇ ಸರ್ಕಾರ ಸಮರ್ಪಕ ಪರಿಶೀಲನೆ ನಡೆಸುವ ಮೂಲಕ ಹೊಸ ಪಠ್ಯ ಪರಿಷ್ಕರಣೆ ಕೈಬಿಟ್ಟು ಹಳೇ ಪುಸ್ತಕವೇ ಮಕ್ಕಳ ಶಿಕ್ಷಣಕ್ಕೆ ಸೌಲಭ್ಯ ಕಲ್ಪಿಸಬೇಕೆಂದು ಅವರು ಒತ್ತಾಯಿಸಿದರು.

ಅಲ್ಲದೇ ಶಿಕ್ಷಣ ಸಚಿವ ಬಿ. ನಾಗೇಶ ಅವರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ಅವರು ಆಗ್ರಹಿಸಿದರು. ಪಠ್ಯ ಪರಿಷ್ಕರಣೆಯಲ್ಲಿ ಇಲ್ಲ ಸಲ್ಲದ ವಿಷಯಗಳನ್ನು ಬಿತ್ತರಿಸುವ ಮೂಲಕ ಮಕ್ಕಳಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಈ ಕೂಡಲೇ ನೂತನ ಪಠ್ಯವನ್ನು ರದ್ದುಗೊಳಿಸಿ ಈ ಮೊದಲಿನ ಪಠ್ಯವನ್ನೇ ಮಕ್ಕಳ ಓದಿಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

ಒಕ್ಕೂಟದ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಹುರಸಗುಂಡಗಿ, ಮುಖಂಡರಾದ ಶಿವಕುಮಾರ ತಳವಾರ, ಮರೆಪ್ಪ ಕ್ರಾಂತಿ, ಬಾಲರಾಜ ಖಾನಾಪುರ, ಮಲ್ಲಪ್ಪ ಪೂಜಾರಿ, ಲಕ್ಷ್ಮಣ ರಸ್ತಾಪುರ, ವಾಸು ಕೋಗಿಲಕರ್‌, ಸಂದೀಪ ಹುರಸಗುಂಡಗಿ, ಭೀಮಾಶಂಕರ ಗುಂಡಳ್ಳಿ, ಶರಬಣ್ಣ ದೋರನಹಳ್ಳಿ, ಸಂತೋಷ ಗುಂಡಳ್ಳಿ ಇತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.