ವಕೀಲರ ವಿರುದ್ಧ ನೀಡಿದ ದೂರು ಕೈಬಿಡಲು ಆಗ್ರಹ
Team Udayavani, Jul 5, 2017, 11:13 AM IST
ಶಹಾಪುರ: ರಾಯಚೂರ ಜಿಲ್ಲೆಯ ದೇವದುರ್ಗದಲ್ಲಿ ಹಿರಿಯ ವಕೀಲರೊಬ್ಬರ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಇಲ್ಲಿನ ವಕೀಲರು ಮಂಗಳವಾರ ಕಲಾಪ ಬಹಿಷ್ಕರಿಸಿ ನ್ಯಾಯಾಲಯ ಎದುರು ಪ್ರತಿಭಟನೆ ನಡೆಸಿದರು.
ದೇವದುರ್ಗ ತಾಲೂಕಿನಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ವಕೀಲರ ಮೇಲೆ ಹಲ್ಲೆ ನಡೆಸಿರುವುದು. ಅಲ್ಲದೆ ಅವರ ಮೇಲೆ ಸುಳ್ಳು ದೂರು ದಾಖಲಿಸಿರುವುದು ಸರಿಯಲ್ಲ. ಪೊಲೀಸರು ಕೂಡಲೇ ಪರಾಮರ್ಶಿಸಿ
ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಹಿರಿಯ ವಕೀಲರ ವಿರುದ್ಧ ನೀಡಿದ ದೂರು ಕೈಬಿಡಬೇಕು ಎಂದು ವಕೀಲರು ಆಗ್ರಹಿಸಿದರು.
ಒಬ್ಬ ವಕೀಲ ತನ್ನ ಕಕ್ಷಿದಾರರ ರಕ್ಷಣೆಗಾಗಿ ಅವರಿಗೆ ನ್ಯಾಯ ಒದಗಿಸುವುದಕ್ಕಾಗಿ ಶ್ರಮವಹಿಸುವುದು ಆತನ ಕರ್ತವ್ಯ. ಕೆಲವರು ವಕೀಲರ ಬಗ್ಗೆ ಅಸಡ್ಡೆ ಅಗೌರವ ತೋರುವುದು ಅವರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ತಾಲೂಕು ಅಧ್ಯಕ್ಷ ಅಮರೇಶ ದೇಸಾಯಿ,
ಕಾರ್ಯದರ್ಶಿ ಹೇಮರಡ್ಡಿ ಕೊಂಗಂಡಿ, ಉಪಾಧ್ಯಕ್ಷ ಗುರು ದೇಶಪಾಂಡೆ, ಹಿರಿಯ ವಕೀಲರಾದ ಸಿ.ಟಿ.ದೇಸಾಯಿ, ಕೆ.ನಯೀಮಸಾಬ, ಮಲ್ಕಪ್ಪ, ಗೋಪಾಲ ವಕೀಲರು, ವಿಶ್ವನಾಥರಡ್ಡಿ ಪಾಟೀಲ್, ಸಾಲೋಮನ್ ಆಲೆಡ್, ಎ.ಎಸ್
.ನಾಯಕ ಸೇರಿದಂತೆ ಸಂತೋಷ ಸತ್ಯಂಪೇಟೆ, ಬಸಮ್ಮ ರಾಂಪೂರೆ, ಸಂತೋಷ ದೇಶಮುಖ, ಸತ್ಯಮ್ಮ, ವಿಶ್ವನಾಥ ಫಿರಂಗಿ, ಎಲ್.ಎಸ್. ಕುಲಕರ್ಣಿ, ಉಮೇಶ ಕುಲಕರ್ಣಿ, ಸಜ್ಜನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ