ತೈಲ ಬೆಲೆ ಇಳಿಸಲು ಒತ್ತಾಯಿಸಿ ಮನವಿ
Team Udayavani, Jul 7, 2020, 11:41 AM IST
ಹುಣಸಗಿ: ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪತಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ವಿನಯಕುಮಾರ ಪಾಟೀಲ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ನಾಗಣ್ಣ ಸಾಹುಕಾರ ದಂಡಿನ, ಕೇಂದ್ರ ಸರಕಾರದ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಬರೆ ಬಿದ್ದಂತಾಗಿದೆ ಎಂದು ಹೇಳಿದರು. ಕಳೆದ ಆರು ತಿಂಗಳಿಂದ ಪೆಟ್ರೋಲ್ ಪ್ರತಿ ಲೀಟರ್ಗೆ 23.78 ಪೈಸೆ, ಡೀಸೆಲ್ 28.37 ಪೈಸೆ ಏರಿಕೆಯಾಗಿದೆ. ಇದು ಪ್ರತಿಶತದಲ್ಲಿ ಲೆಕ್ಕ ಹಾಕಿದರೆ ಶೇ. 258% ಪೆಟ್ರೋಲ್, ಶೇ. 820ರಷ್ಟು ಡೀಸೆಲ್ ಹೆಚ್ಚಳವಾಗಿದೆ ಎಂದು ಆರೋಪಿಸಿದರು.
ಈಗಾಗಲೇ ಕೋವಿಡ್-19 ಇಂದಾಗಿ ಜನರು ತತ್ತರಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಜನಸಾಮಾನ್ಯರಿಗೆ ಹೊರೆಯಾಗಿದೆ. ತಕ್ಷಣವೇ ತೈಲ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಿಗೌಡ(ಗೌಡಪ್ಪಗೌಡ) ಹಣಮರೆಡ್ಡಿ, ಸಿದ್ದಣ್ಣ ಮಲಗಲದಿನ್ನಿ, ಗುರುಲಿಂಗಪ್ಪ ಸಜ್ಜನ, ಚನ್ನಯ್ಯಸ್ವಾಮಿ ಹಿರೇಮಠ, ಈರಣ್ಣ ದೇಸಾಯಿ, ಪಪಂ ಸದಸ್ಯ ನಾಗಯ್ಯಸ್ವಾಮಿ ದೇಸಾಯಿಗುರು, ಖಾಜಾ ಪಟೇಲ್, ಶಾಂತಪ್ಪ ಬಾಕ್ಲಿ, ಭೀಮಣ್ಣ ನಾಟೇಕರ್, ಮಲ್ಲಣ್ಣ ಕಟ್ಟಿಮನಿ, ಕನಕಪ್ಪ ದೊರಿ, ತಿರುಪತಿ ನಾಯ್ಕ, ರವಿ ಮಲಗಲದಿನ್ನಿ, ಸಿದ್ದನಗೌಡ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ