ನೀರು ಹಿತ-ಮಿತವಾಗಿ ಬಳಸಲು ಮನವಿ
Team Udayavani, Apr 26, 2021, 9:16 PM IST
ಯಾದಗಿರಿ : ಬಿರು ಬೇಸಿಗೆಯಲ್ಲಿ ಸಾರ್ವಜನಿಕರಿಗಾಗಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ. ಜನರು ನೀರನ್ನು ಪೋಲು ಮಾಡದೆ ಹಿತ-ಮಿತವಾಗಿ ಬಳಸಬೇಕು ಎಂದು ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್ ಹೇಳಿದರು.
ನಗರದ ಗಾಂಧಿ ವೃತ್ತದಲ್ಲಿ ಇತ್ತೀಚೆಗೆ ಇಲ್ಲಿನ ಬನ್ನಿಬಸವ ಸೇವಾ ಸಂಸ್ಥೆಯಿಂದ ನೀರಿನ ಅರವಟಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂತಹ ಅವಶ್ಯಕ ವ್ಯವಸ್ಥೆಯನ್ನು ಸಂಸ್ಥೆಯ ಯುವಕರು ಮಾಡಿದ್ದಾರೆ. ಬೇಸಿಗೆ ವೇಳೆ ಗ್ರಾಮೀಣ ಪ್ರದೇಶದಿಂದ ಆಗಮಿಸುವ ಜನರಿಗೆ ತಂಪಾದ ನೀರು ಒದಗಿಸುವುದು ಪುಣ್ಯದ ಕಾರ್ಯ ಎಂದರು. ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ್ ಮಾತನಾಡಿ, ಒಳ್ಳೆಯ ಕಾರ್ಯಗಳನ್ನು ನಾವೆಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು. ಈ ಕಾರ್ಯ ಕೇವಲ ಬೇಸಿಗೆ 2 ತಿಂಗಳು ಅಲ್ಲದೆ ವರ್ಷಪೂರ್ತಿ ಬಳಕೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ಮುಖಂಡ ಬನದೇಶ ಎಕ್ಕಳ್ಳಿ, ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಇಂದುಧರ್ ಸಿನ್ನೂರ್, ಬನ್ನಿ ಬಸವ ಸಂಘದ ಅಧ್ಯಕ್ಷ ಜಗದೀಶ ಜಾಕಾ, ಅಂಬರೀಶ ಜಾಕಾ, ವೀರೇಶ್ ನಿಲುಗಿ, ರಾಜಶೇಖರ ಉಪ್ಪಿನ್, ಚೇತನ್ ಲದ್ದಿ, ವಿಶ್ವನಾಥ ಮದ್ದಿನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ