ಅಗ್ನಿಪಥ್ ಯೋಜನೆ ಹಿಂಪಡೆಯಲು ಮನವಿ
Team Udayavani, Jun 25, 2022, 1:18 PM IST
ಬಸವಕಲ್ಯಾಣ: ಯುವಕರನ್ನು ನಾಲ್ಕು ವರ್ಷದ ನಂತರ ನಿರುದ್ಯೋಗಿಗಳನ್ನು ಸೃಷ್ಟಿಸುವ ಅಗ್ನಿಪಥ್ ಯೋಜನೆ ಬೇಕಾಗಿಲ್ಲ. ಜೀನವಪೂರ್ತಿ ಉದ್ಯೋಗ ದೊರಕುವಂತಹ ಯೋಜನೆ ರೂಪಿಸಬೇಕಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಹೇಳಿದರು.
ನಗರದ ಡಾ| ಅಂಬೇಡ್ಕರ್ ವೃತ್ತದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ನಮ್ಮ ಯೋಧರು ಸಶಕ್ತರಾಗಿದ್ದು, ಹಿಂದೆ ಅನೇಕ ಯುದ್ಧಗಳನ್ನು ಗೆದ್ದಿದ್ದಾರೆ. ಆದರೂ ಅಗ್ನಿಪಥ್ ಯೋಜನೆಯಿಂದ ನಾವಿನ್ಯತೆ ತಂದುಕೊಡುತ್ತೇನೆ ಎಂದು ಹೇಳಿ ಇತರೆ ಸೈನಿಕ ಮನೋಬಲ ಕುಗ್ಗಿಸಬಾರದು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಜನರು ಬದುಕು ದುರ್ಬಲವಾಗಿದೆ. ಬೆಲೆ ಏರಿಕೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ದೂರಿದರು.
ಮುಖಂಡ ಶಾಂತಪ್ಪ ಪಾಟೀಲ್, ಬಾಬು ಹೊನ್ನಾನಾಯಕ, ಮನೋಹರ ಮೈಸೆ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ನೀಲಕಂಠ ರಾಠೊಡ, ನಗರ ಘಟಕದ ಅಧ್ಯಕ್ಷ ಅಜರ ಅಲಿ ನವರಂಗ, ಕೇಶಪ್ಪ ಬಿರಾದಾರ್, ರೈಸೋದ್ಧಿನ್ ಮಾತನಾಡಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬೊಕ್ಕೆ, ರಾಮ ಜಾಧವ, ಯೋಗೇಶ ಗುತ್ತೆದಾರ, ಅಶೋಕ ಢಗಳೆ, ಡಿ.ಕೆ. ದಾವುದ್, ಆನಂದ ಹೊನ್ನನಾಯಕ, ಅಶೋಕ ಮದಾಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ