ರಸ್ತೆ ಅಗಲೀಕರಣ ಚುರುಕು
Team Udayavani, Aug 4, 2018, 3:23 PM IST
ಕಕ್ಕೇರಾ: ಪಟ್ಟಣದಲ್ಲಿ ರಸ್ತೆ ಅಗಲೀಕರಿಸಿ ಅಭಿವೃದ್ಧಿಪಡಿಸಲು ಶುಕ್ರವಾರ ಸೂಕ್ ಪೊಲೀಸ್ ಬಂದೋಬಸ್ತ್ನೊಂದಿಗೆ ಜೆಸಿಬಿ ಬಳಸಿ ಲೋಕೋಪಯೋಗಿ ಆದೇಶದ ಮೇರೆಗೆ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯ ನಡೆಯಿತು.
ಪಟ್ಟಣದ ವಾಲ್ಮೀಕಿ ವೃತ್ತ ಅಭಿವೃದ್ಧಿಗಾಗಿ ಬಲಶೆಟ್ಟಿಹಾಳ, ಹುಣಸಗಿ, ಶಾಂತಪುರ ಮೂರು ಮುಖ್ಯ ರಸ್ತೆಗಳವರೆಗೂ
ಅಂಗಡಿಗಳ ತೆರವುಗೊಳಿಸಲಾಯಿತು. ರಸ್ತೆ ಅಗಲೀಕರಣಕ್ಕೆ ಈಗಾಗಲೇ ವರ್ತಕರಿಗೆ ಮೂರು ಬಾರಿ ನೋಟಿಸ್ ನೀಡಿ
ಎಚ್ಚರಿಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂದೆ ಹಾಕಿಕೊಂಡಿದ್ದ ಶೆಡ್ಗಳನ್ನು ತೆಗೆದಿದ್ದರು.
ಶುಕ್ರವಾರ ಬೆಳಗ್ಗೆ ಅಧಿಕಾರಿಗಳು ಐದು ಜೆಸಿಬಿಗಳ ಮೂಲಕ ಅಂಗಡಿಗಳ ತೆರವು ಕಾರ್ಯ ಭರ್ಜರಿ ನಡೆಸಿದರು. ರಸ್ತೆಯ ಎರಡು ಬದಿಗೂ ಜೆಸಿಬಿ ನಿಂತು ಅಂಗಡಿಗಳ ತೆರವುಗೆ ಮುಂದಾಗಿದ್ದರಿಂದ ಪಟ್ಟಣದಲ್ಲಿ ದೂಳು ಎದ್ದು ಕೆಲ
ಸಮಯ ಸಾರ್ವಜನಿಕರು ಮುಗು ಕಟ್ಟಿಕೊಂಡು ಸಂಚರಿಸುವಂತಾದರೆ ಇನ್ನೂ ವಾಹನ, ಬೈಕ್ ಸವಾರರು ಸಂಚಾರಕ್ಕೆ ಪರಿತಪಿಸಬೇಕಾಯಿತು.
ಬೀದಿಪಾಲಾದ ವರ್ತಕರು: ಅನೇಕ ವರ್ಷಗಳಿಂದಲೂ ಅನಧಿಕೃತವಾಗಿ ಅಂಗಡಿ ಹಾಕಿಕೊಂಡು ವ್ಯಾಪಾರಕ್ಕೆ ಹಣಿಯಾಗಿದ್ದರು. ಆದರೆ ರಸ್ತೆ ಅಗಲೀಕರಣ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ವರ್ತಕರು ವ್ಯಾಪಾರಕ್ಕೆ ಸ್ಥಳಾವಕಾಶ ಇಲ್ಲದೆ ಬೀದಿಪಾಲಾಗುವಂತೆ ಮಾಡಿದೆ ಎಂದು ಜನರ ಅಭಿಪ್ರಾಯವಾಗಿದೆ.
ಯಾವ ರೀತಿ ಅಭಿವೃದ್ಧಿ?: 2018-19ನೇ ಸಾಲಿನ ಎಚ್ಕೆಆರ್ಡಿಬಿ ವತಿಯಿಂದ ರಸ್ತೆ ಅಭಿವೃದ್ಧಿಗಾಗಿ ಮಾರ್ಚ್ ತಿಂಗಳಲ್ಲಿಯೇ 50 ಲಕ್ಷ ರೂ. ಅನುದಾನದ ಟೆಂಡರ್ ಕರೆಯಲಾಗಿತ್ತು. ಆದರೆ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದ್ದರಿಂದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಸದ್ಯ ವಾಲ್ಮೀಕಿ ವೃತ್ತದಿಂದ
50 ಮೀಟರ್ನಂತೆ ಮೂರು ಪ್ರಮುಖ ರಸ್ತೆಗೆ ಡಾಂಬರೀಕರಣ ಹಾಕಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಒಟ್ಟು 150 ಮೀಟರ್ ಉದ್ದದ ರಸ್ತೆ ಅಭಿವೃದ್ಧಿಯಾಗಲಿದೆ.
ರಸ್ತೆ ಮಧ್ಯ ಭಾಗದಿಂದ 7.5 ಮೀಟರ್ನಂತೆ ಎರಡು ಬದಿ ಸೇರಿ ಒಟ್ಟು 15 ಮೀಟರ್ ರಸ್ತೆ ಅಗಲೀಕರಣಗೊಳಿಸಲಾಗುತ್ತಿದೆ ಎನ್ನಲಾಗುತ್ತಿ¨
ಅಂಗಡಿ ತೆರವು ಕಾರ್ಯ ಚುರುಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ವರ್ತಕರಿಗೆ ಮೂರು ಬಾರಿ ನೋಟಿಸ್ ನೀಡಿತ್ತು. ಅಲ್ಲದೆ ಡಂಗುರ ಸಾರಲಾಗಿತ್ತು. ತೆರವುಗೊಳಿಸುವ ಕಾರ್ಯ ಮುಗಿದ ತಕ್ಷಣವೇ ಎರಡು-ಮೂರು ದಿನಗಳಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುವುದು.
ಸುಭಾಶ್ಚಂದ್ರ, ಎಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್