ಹರಕೆ ಕುರಿಮರಿ ಹರಾಜು: 11.75 ಲಕ್ಷ ರೂ. ಸಂಗ್ರಹ
Team Udayavani, Jan 16, 2019, 8:32 AM IST
ಯಾದಗಿರಿ: ಮೈಲಾರಲಿಂಗೇಶ್ವರ ಜಾತ್ರೆ ಸಂದರ್ಭದಲ್ಲಿ ಜಿಲ್ಲಾಡಳಿತ ವಶಪಡಿಸಿಕೊಂಡು 925 ಕುರಿಮರಿಗಳನ್ನು ಮಂಗಳವಾರ ಬಹಿರಂಗ ಹರಾಜು ಮಾಡಲಾಯಿತು.
ಇದರಿಂದ ಬರೋಬ್ಬರಿ 11.75 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಜಾತ್ರೆಯಲ್ಲಿ ರವಿವಾರ ಮತ್ತು ಸೋಮವಾರ ಪಲ್ಲಕ್ಕಿ ಉತ್ಸವ ಹಿನ್ನೆಲೆ ಹರಿಕೆ ಹೊತ್ತ ಭಕ್ತರು ಪಲ್ಲಕ್ಕಿ ಮೇಲೆ ಕುರಿಮರಿ ಎಸೆದು ಹರಿಕೆ ತೀರಿಸಿಕೊಳ್ಳುವ ವಾಡಿಕೆ ನಡೆದು ಬಂದಿದ್ದು, ಪ್ರಾಣಿ ಹಿಂಸೆ ಕಾಯ್ದೆಯಡಿ ಜಿಲ್ಲಾಡಳಿತ ಕುರಿಗಳನ್ನು ಹಾರಿಸುವುದು ನಿಷೇಧಿಸಿದೆ. ಆದರೂ ಎರಡು ದಿನಗಳಲ್ಲಿ ಒಟ್ಟು 925 ಕುರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹರಾಜಿನ ವೇಳೆ ತಲಾ ಐದು ಸಾವಿರ ರೂಪಾಯಿ ಠೇವಣಿ ಪಡೆದು ಹರಾಜು ಮಾಡಲು ಅವಕಾಶ ನೀಡಲಾಗಿತ್ತು. ಈ ವೇಳೆ 60ಕ್ಕೂ ಹೆಚ್ಚು ಜನರು ಭಾಗವಹಿಸಿ, ಒಂದೊಂದು ಗುಂಪು 10,20 ಕುರಿಗಳ ಲಾಟ್ನ್ನು 10ರಿಂದ 20 ಸಾವಿರದ ವರೆಗೆ ಹರಾಜು ಮಾಡಿ ಸಾರ್ವಜನಿಕರು ಖರೀದಿಸುತ್ತಿರುವುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ