48.59 ಲಕ್ಷ ರೂ. ಉಳಿತಾಯ ಬಜೆಟ್‌


Team Udayavani, Feb 23, 2018, 5:37 PM IST

yad-6.jpg

ಯಾದಗಿರಿ: ನಗರಸಭೆ ಸಭಾಂಗಣದಲ್ಲಿ ಗುರುವಾರ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಅಧ್ಯಕ್ಷತೆಯಲ್ಲಿ ನಡೆದ 2018-19ನೇ ಸಾಲಿನ ಆಯವ್ಯಯ (ಬಜೆಟ್‌) ಮಂಡನೆ ಸಭೆಯಲ್ಲಿ ಪೌರಾಯುಕ್ತ ಸಂಗಪ್ಪ ಉಪಾಸೆ ಅವರು 48.59 ಲಕ್ಷ ರೂ., ಉಳಿತಾಯ ಬಜೆಟ್‌ ಮಂಡಿಸಿದರು. ಆಯವ್ಯಯವನ್ನು ನಗರಸಭೆ ನಿಧಿ ಮತ್ತು ಸರಕಾರದ ಅನುದಾನಗಳೆಂದು ಎರಡು ಭಾಗಗಳಾಗಿ ವಿಂಗಡಿಸಿಕೊಳ್ಳಲಾಗಿದೆ.

2018-19ನೇ ಸಾಲಿನಲ್ಲಿ ನಗರಸಭೆ ನಿಧಿಯಲ್ಲಿ 484 ಲಕ್ಷ ರೂ., ಆದಾಯ ನಿರೀಕ್ಷಿಸಲಾಗಿದ್ದು, 435 ಲಕ್ಷ ರೂ., ಗಳು ಖರ್ಚಿಗೆ ಅಂದಾಜಿಸಲಾಗಿದೆ. ಸರಕಾರದಿಂದ 1,810 ಲಕ್ಷ ರೂ., ನಿರೀಕ್ಷಿಸಲಾಗಿದ್ದು, 1,810 ಲಕ್ಷ ರೂ., ಖರ್ಚು ಮಾಡಲು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ನಗರಸಭೆ ನಿಧಿ ಹಾಗೂ ಸರಕಾರದಿಂದ ಒಟ್ಟು 2,295 ಲಕ್ಷ ಆದಾಯ ನಿರೀಕ್ಷಿಸಲಾಗಿದ್ದು, 22,456 ಲಕ್ಷ ರೂ., ಖರ್ಚು ಮಾಡಲು ನಿರ್ಧರಿಸಲಾಗಿದ್ದು, ಒಟ್ಟು 48.59 ಲಕ್ಷಗಳ ರೂ., ಉಳಿತಾಯದ ಆಯವ್ಯಯ ಮಂಡಿಸಲಾಗಿದೆ. ಹಿಂದಿನ ಸಾಲಿನ ನಗದು ಹಾಗೂ ಬ್ಯಾಂಕ್‌ ಶಿಲ್ಕುಗಳು ರೂ. 2,421 ಲಕ್ಷಗಳಾಗಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟು 4,716 ಲಕ್ಷ ರೂ., ಆಯವ್ಯಯದ ಮೊತ್ತವಾಗಿದೆ ಎಂದರು.

2017-18ನೇ ಸಾಲಿನ ಡಿಸೆಂಬರ್‌ ಅಂತ್ಯದವರೆಗೆ 1,022 ಲಕ್ಷ ರೂ., ಆದಾಯ ಬಂದಿದ್ದು, 766 ಲಕ್ಷ ರೂ. ಖರ್ಚು ಮಾಡಿ
ಶೇ.75% ರಷ್ಟು ಗುರಿ ಸಾಧಿಸಲಾಗಿದೆ. ಈ ಆಯವ್ಯಯದಲ್ಲಿ ಜನಸಾಮಾನ್ಯರ ಮತ್ತು ನಗರ ಸಭೆ ಸದಸ್ಯರುಗಳ ಸಲಹೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಹಿಂದಿನ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಈ ವರ್ಷದ ಹಲವಾರು ಹೊಸ ಕಾರ್ಯಕ್ರಮ ರೂಪಿಸಲು ಯೋಚಿಸಲಾಗಿದೆ ಎಂದರು.

ಲಕ್ಷ್ಮೀನಗರ ಹಾಗೂ ಗಂಜ್‌ ಏರಿಯಾದರಲ್ಲಿ 10 ಲಕ್ಷ ಲೀಟರ್‌ ಸಾಮರ್ಥ್ಯದ ಎರಡು ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ, ಐದು ಶುದ್ಧ ಕುಡಿಯುವ ನೀರಿನ ಘಟಕ, 5 ನೀರಿನ ಅರವಟ್ಟಿಗೆಗಳು, ಖಾಸಗಿಯವರ ಸಹಭಾಗಿತ್ವದಲ್ಲಿ 5 ಸಾರ್ವಜನಿಕರ ಶೌಚಾಲಯ ನಿರ್ಮಾಣ. ಸ್ವತ್ಛತೆಗೆ ಪೂರಕವಾಗಿ 2 ಟಿಪ್ಪರ್‌, 2 ಸಕ್ಕಿಂಗ್‌ ಮಷಿನ್‌ ಖರೀದಿಸುವುವದು. ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ್ಕಕಾಗಿ ಫೀ ಮತ್ತು ಪುಸ್ತಕಗಳಿಗೆ ಧನ ಸಹಾಯ ನೀಡುವುದು. ಪೌರಕಾರ್ಮಿಕರಿಗಾಗಿ ನಿಧಿ ಸ್ಥಾಪನೆ, ಪ್ರಕೃತಿ ವಿಕೋಪದಿಂದ ಹಾಳಾಗಿರುವ ಆಸ್ತಿಗಳಿಗೆ ಧನ ಸಹಾಯ ನೀಡುವುದು. ಉದ್ಯಾನವನ ನಿರ್ವಹಣೆಗೆ ಕ್ರಮ ವಹಿಸುವದು. ಪೌರ ಕಾರ್ಮಿಕರ ನೇಮಕ. ಬೀದಿ ದನಗಳ ನಿಯಂತ್ರಣಕ್ಕೆ ತಂಡ ರಚನೆ, ವಾಸ್ತು ಶಿಲ್ಪ ಮತ್ತು ಪಕ್ಷಿ ಸಂಗ್ರಹಾಲಯಕ್ಕೆ ಅವಕಾಶ ಮಾಡಿಕೊಡುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ
ಪಂಗಡ, ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಜನಾಂಗದ ಅಭಿವೃದ್ಧಿಗೆ ಮತ್ತು ಅಂಗವಿಕಲರ ಅಭಿವೃದ್ಧಿಗೆ ಹಣ ನಿಗದಿಗೊಳಿಸಿರುವುದು ಈ ಆಯವ್ಯಯದ ಮುಖ್ಯ ಆಶಯಗಳಾಗಿವೆ ಎಂದರು.

ಇದೇ ಸಂದರ್ಭದಲ್ಲಿ ಸರ್ವ ಸದಸ್ಯರು ಉಳಿತಾಯ ಬಜೆಟ್‌ ಮಂಡನೆಗೆ ಅನುಮೋದನೆ ನೀಡಿದರು.  ನಗರದ ಬಹುತೇಕ ವಾರ್ಡ್‌ಗಳಲ್ಲಿ ಕೊಳವೆ ಬಾವಿ, ಸಾರ್ವಜನಿಕ ಶೌಚಾಲಯ ದುರಸ್ತಿ ಹಾಗೂ ಶೌಚಾ ಲಯ ನಿರ್ಮಾಣ ಕಾಮಗಾರಿಗೆ
ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ನಗರಸಭೆ ಸದಸ್ಯರು ನಗರಸಭೆ ಪೌರಾಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಸಭೆಯಲ್ಲಿ ಪೌರಾಯುಕ್ತ ಸಂಗಪ್ಪ ಉಪಾಸೆ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಜಾರಿ ಆಗುವುದರೊಳಗೆ ಎಲ್ಲ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಮಾಡಿ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ವಾರ್ಡ್‌, ನಂ. 21ರಲ್ಲಿ ಕೊಳವೆ ಬಾವಿ ಮೂಲಕ ಟ್ಯಾಂಕ್‌ಗೆ ನೀರು ಸರಬರಾಜು ಕಾಮಗಾರಿಗೆ 10 ಲಕ್ಷ ರೂ., ಟೆಂಡರ್‌ ಆಗಿ ಒಂದು ವರ್ಷವಾಗಿದೆ. ಆದರೆ ಕೆಲಸ ಮಾತ್ರ ಆಗಿಲ್ಲ ಎಂದು ಸದಸ್ಯರು ಆರೋಪಿಸಿದಾಗ, ಪೌರಾಯುಕ್ತರು ಮಾತನಾಡಿ, ಕೂಡಲೇ ಗುತ್ತಿಗೆದಾರರಿಗೆ ನೋಟೀಸ್‌ ಜಾರಿ ಮಾಡಿ ಅವರನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸುವುದಾಗಿ ಹೇಳಿದರು. ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಸ್ಯಾಂಸನ್‌ ಮಾಳಿಕೇರಿ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.