ಸಗರಾದ್ರಿ ಮಡಿಲಲಿ ಚರಬಸವ ತಾತಾನ ಸಂಭ್ರಮದ 100 ನೇ ರಥೋತ್ಸವ
Team Udayavani, Apr 7, 2022, 1:00 PM IST
ಶಹಾಪುರ : ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿಯಿಂದ ಜಾತ್ರೆ, ಉತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳಿಗೆ ಮಂಕು ಕವಿದಿತ್ತು. ಈ ವರ್ಷ ಇಲ್ಲಿನ ಸಗರನಾಡಿನ ಆರಾಧ್ಯ ದೈವ ಸಗರಾದ್ರಿ ಬೆಟ್ಟಗಳ ಮಧ್ಯದಲ್ಲಿ ನೆಲೆ ನಿಂತ ಶ್ರೀ ಚರಬಸವೇಶ್ವರರ 100 ನೇ ವರ್ಷದ ಮಹಾ ರಥೋತ್ಸವ ಅಸಂಖ್ಯಾತ ಭಕ್ತರ ಜಯಘೋಷಗಳ ನಡುವೆ ಬುಧವಾರ ಸಂಜೆ 6 ಗಂಟೆಗೆ ಸಂಭ್ರಮದಿಂದ ಜರುಗಿತು.
ಈ ಬಾರಿ ವಿಶೇಷವಾಗಿ ಚರಬಸವ ತಾತಾ ಹಲವಾರು ಗ್ರಾಮಗಳಲ್ಲಿ ನೆಲೆಸಿ ಅಲ್ಲಿನ ಜನರಿಗೆ ಉತ್ತಮ ಮಾರ್ಗದರ್ಶನ ನೀಡಿ, ಕಾಯಕ, ದಾಸೋಹ ತತ್ವ ಪ್ರತಿಪಾದಿಸಿದ್ದ, ಹಲವಾರು ಪವಾಡಗಳನ್ನು ಮೆರೆದಿದ್ದ ಚರಬಸವ ತಾತಾನ ಭಕ್ತರು ಆಯಾ ಗ್ರಾಮಗಳಿಂದ ತಾತನ ಬೆತ್ತ ಅಂದರೆ ಮಂತ್ರದಂಡವನ್ನು ಹೊತ್ತು ಮೆರವಣಿಗೆ, ಕಾಲ್ನಡಿಗೆ ಮೂಲಕ ರಥೋತ್ಸವಕ್ಕೆ ಆಗಮಿಸಿರುವದು ವಿಶೇಷವಾಗಿತ್ತು.
ಪ್ರಥಮವಾಗಿ ರಥೋತ್ಸವಕ್ಕೆ ಬಾಡಿಯಾಳ ಶ್ರೀಗಳು ಪೂಜೆ ಸಲ್ಲಿಸಿ ಚಾಲನೆ ನೀಡಿದ್ದರು. ರಥೋತ್ಸವಕ್ಕೆ ಚಾಲನೆ ದೊರೆಯುತ್ತಿದ್ದಂತೆ ನೆರೆ ಭಕ್ತಾಧಿಗಳು ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆಗೈದರು. ನಾಳೆಯಿಂದ ದೊಡ್ಡ ಪ್ರಮಾಣದಲ್ಲಿ ಜಾನುವಾರು ಜಾತ್ರೆ ಒಂದು ವಾರಗಳ ವರೆಗೆ ನಡೆಯಲಿದೆ. ಜಾತ್ರೆಗೆ ಬೇಕಾದ ಮೂಲ ಸೌಲಭ್ಯವನ್ನು ತಾಲೂಕು ಆಡಳಿತ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ