ಸೈದಾಪುರ: ಕ್ವಾರಂಟೈನ್‌ಲ್ಲಿದ್ದ 9 ಜನಕ್ಕೆ ಸೋಂಕು


Team Udayavani, Jun 7, 2020, 12:36 PM IST

07-June-08

ಸಾಂದರ್ಭಿಕ ಚಿತ್ರ

ಸೈದಾಪುರ: ಮುಂಬೈನಿಂದ ಜಿಲ್ಲೆಗೆ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಮುಗಿಸಿ ಪಟ್ಟಣಕ್ಕೆ ಬಂದಿದ್ದ ಪುರುಷನೊಬ್ಬನಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತ ವ್ಯಕ್ತಿ ಮೂರು ದಿನಗಳಲ್ಲಿ ಪಟ್ಟಣದಲ್ಲಿ ಅಲೆದಾಡಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಹಾಟ್‌ಸ್ಪಾಟ್‌ ನಗರಗಳಾದ ಪುಣೆ, ಮುಂಬೈ ಮತ್ತು ಹೈದ್ರಾಬಾದ್‌ನಿಂದ ಆಗಮಿಸಿದ ವಲಸಿಗರನ್ನು ಪಟ್ಟಣದ ಸ್ವಾಮಿ ವಿವೇಕಾನಂದ ವಸತಿ ಶಾಲೆಯಲ್ಲಿ 39 ಜನ, ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ 37 ಜನ, ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿ 255 ಜನ ಸೇರಿ 331 ಕಾರ್ಮಿಕರನ್ನು ಕ್ವಾರಂಟೈನ್‌ ಮಾಡಲಾಗಿತ್ತು. ಮೇ 25ರಂದು ಮೂಗು ಮತ್ತು ಗಂಟಲು ದ್ರವ ತೆಗೆದುಕೊಂಡು ಕೋವಿಡ್ ಪರೀಕ್ಷೆಗಾಗಿ ಪ್ರಯೋಗಲಾಯಕ್ಕೆ ಕಳುಹಿಹಿಸಿಕೊಡಲಾಗಿದೆ. ಆದರೆ ಸರ್ಕಾರದ ಆದೇಶದಂತೆ ಕೋವಿಡ್ ಪರೀಕ್ಷೆ ಫಲಿತಾಂಶ ಬರುವ ಮುನ್ನವೇ ಮೇ 30 ಮತ್ತು ಜೂನ್‌ 2ರಂದು ಎಲ್ಲರಿಗೂ ಗೃಹ ಬಂಧನದಲ್ಲಿರುವಂತೆ ತಿಳಿಸಿ ಸಾಂಸ್ಥಿಕ ಕ್ವಾರಂಟೈನಿಂದ ಬಿಡುಗಡೆ ಮಾಡಲಾಗಿದೆ.

ಸೈದಾಪುರದ ಒಬ್ಬನ ಸೇರಿದಂತೆ ಸಮೀಪದ ಬಾಲಛೇಡ ಗ್ರಾಮದ ಇಬ್ಬರಿಗೆ ಸೋಂಕು ದೃಡಪಟ್ಟಿದೆ. ಸೋಂಕಿತರು ಗೃಹ ಬಂಧನದಲ್ಲಿರದೆ ಪಟ್ಟಣದ ಕ್ಷೌರಿಕ ಮತ್ತು ಮಾರಕಟ್ಟೆ ಸೇರಿದಂತೆ ಗ್ರಾಮಗಳಲ್ಲಿ ಅಲೆದಾಡಿದ್ದಾರೆ. ಇದು ಕೋವಿಡ್ ಆತಂಕ ಹೆಚ್ಚಾಗುವಂತೆ ಮಾಡಿದೆ. ಪಟ್ಟಣದ ಹೊರವಲದಲ್ಲಿರುವ ಮೂರು ಕ್ವಾರಂಟೈನ್‌ ಕೇಂದ್ರದಲ್ಲಿದ್ದ 331 ವಲಸಿಗರಲ್ಲಿ 9 ಜನಕ್ಕೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಇಲ್ಲಿನ ಸಿಬ್ಬಂದಿಗೂ ಆತಂಕ ಎದುರಾಗಿದೆ.

ಜೂ. 1ರಿಂದ ರೈಲು ಸಂಚಾರ ಆರಂಭವಾಗಿದೆ. ಈಗಾಗಲೇ ಮುಂಬೈನಿಂದ ಹಲವಾರು ಪ್ರಯಾಣಿಕರು ಆಗಮಿಸಿದ್ದಾರೆ. ಅವರೆಲ್ಲನ್ನು ಕ್ವಾರಂಟೈನ್‌ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ರೈಲುಗಳ ಸಂಚಾರ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸುವ ನಿರೀಕ್ಷೆಯಿದೆ.

ಕ್ಷೌರದ ಅಂಗಡಿಗಳು ಬಂದ್‌
ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಮುಗಿಸಿ ಪಟ್ಟಣಕ್ಕೆ ಆಗಮಿಸಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಕ್ಷೌರ ಮಾಡಿಸಿಕೊಂಡಿದ್ದಾನೆ. ಇದರಿಂದ ಕ್ಷೌರಿಕರ ಕುಟುಂಬ ಸೇರಿದಂತೆ ಆಗಂಡಿಯಲ್ಲಿ ಕ್ಷೌರ ಮಾಡಿಸಿಕೊಂಡ ಜನರಲ್ಲಿ ಆತಂಕ ಹೆಚ್ಚಾಗಿದೆ. ಆದರಿಂದ ಪಟ್ಟಣದ ಕ್ಷೌರದ ಅಂಗಡಿ ಮಾಲಿಕರು ಜೂನ್‌ 22ರ ವರೆಗೆ 15 ದಿನಗಳ ಕಾಲ ತಮ್ಮ ಅಂಗಡಿಗಳನ್ನು ಬಂದ್‌ ಮಾಡಿ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್‌ ನಿಯಮ ವಿಧಿಸಿಕೊಂಡಿದ್ದಾರೆ.

ಜಿಲ್ಲೆಯ ಸುಮಾರು ಐದು ಸಾವಿರಕ್ಕಿಂತ ಹೆಚ್ಚು ಕೋವಿಡ್ ಫಲಿತಾಂಶ ಬರುವುದು ಬಾಕಿ ಇದೆ. ಮುಂದಿನ 2 ವಾರಗಳಲ್ಲಿ ಬರುವ ನಿರೀಕ್ಷೆ ಇದೆ. ಈ ದಿನಗಳು ಅತ್ಯಂತ ಸೂಕ್ಷ್ಮವಾಗಿವೆ. ಈ ಸಮಯದಲ್ಲಿ ಗೃಹ ಬಂಧನದಲ್ಲಿರುವವರು ಸ್ವಯಂ ಜಾಗೃತಿಯೊಂದಿಗೆ ಸಾಮಾಜಿಕ ಜವಾಬ್ದಾರಿ ನಿಭಾಹಿಸಬೇಕು. ನಿಯಮ ಉಲ್ಲಂಘಿಸಿ ಮನೆ ಬಿಟ್ಟು ಹೊರಗೆ ಬಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆ. ಆದ್ದರಿಂದ ಸಾರ್ವಜನಿಕರು ಆತಂಕ ಪಡದೆ ಮುಂಜಾಗೃತಾ ಕ್ರಮ ಕೈಗೊಂಡು ಕೊರೊನಾ ಹರಡುವುದನ್ನು ತಡೆಗಟ್ಟಲು ಆಡಳಿತ ವರ್ಗಕ್ಕೆ ಸಹಕಾರ ನೀಡಬೇಕು.
ಶಂಕರಗೌಡ ಸೋಮನಾಳ,
ಸಹಾಯಕ ಆಯುಕ್ತ ಯಾದಗಿರಿ

ಭೀಮಣ್ಣ ಬಿ. ವಡವಟ್‌

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗರೆಡ್ಡಿ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

Yadagiri; ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

Yadagiri; ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.